Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಡ್ಸ್‌ ತರಹದ ಮಾರಕ ರೋಗಗಳು ದೂರವಾಗಲು ಶಿಕ್ಷಣದ ಪಾತ್ರ ಪ್ರಮುಖ : ಜಿಪಂ ಸಿಇಒ ಎಂ.ಎಸ್. ದಿವಾಕರ್

Facebook
Twitter
Telegram
WhatsApp

 

ಚಿತ್ರದುರ್ಗ : ದೇಶವು ಮುಂದುವರಿಯಬೇಕೆಂದರೆ ಏಡ್ಸ್ ತರಹದ ಮಾರಕ ರೋಗಗಳು ದೂರವಾಗಬೇಕು ಅದು ದೂರವಾಗಬೇಕೆಂದರೆ ಜನರಲ್ಲಿ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗಾಗಿ ಇದರಲ್ಲಿ ಶಿಕ್ಷಣದ ಪಾತ್ರ ತುಂಬಾ ಮುಖ್ಯವಾಗಿದೆ ಎಂದು ಜಿ.ಪಂ.ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಂ ಎಸ್ ದಿವಾಕರ್ ಹೇಳಿದರು.

ಅವರು ನಗರದ ಹೊರವಲಯದ ಎಸ್.ಆರ್.ಎಸ್. ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ,  ರಾಷ್ಟ್ರೀಯ ಸೇವಾಯೋಜನೆ ಘಟಕಗಳ ಸಹಭಾಗಿತ್ವದಲ್ಲಿ ಏಡ್ಸ್ ಎಂಬ ಮಾರಕ ರೋಗದ ಬಗ್ಗೆ ಜಾಗೃತಿ ಮೂಡಿಸುವ “ವಿಶ್ವ ಏಡ್ಸ್ ದಿನ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಆರ್.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ರವಿ ಟಿ.ಎಸ್. ಅವರು ಮಾತನಾಡಿ, ಏಡ್ಸ್ ಖಾಯಿಲೆ ಬಂದವರು ಮಾನಸಿಕವಾಗಿ, ಆರ್ಥಿಕವಾಗಿ, ಸಾಮೂಹಿಕವಾಗಿ ಕುಗ್ಗಿ ಹೋಗುತ್ತಾರೆ ಹಾಗಾಗಿ ಈ ಖಾಯಿಲೆಯನ್ನು ತಡೆಯುವ ಮಾರ್ಗವೆಂದರೆ ಸುರಕ್ಷತೆ ಮತ್ತು ತಿಳಿವಳಿಕೆ ಹೊಂದಿರಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ  ಹಿರಿಯ ಸಿವಿಲ್ ನ್ಯಾಯಾಧೀಶರು ಗಿರೀಶ್ ಬಿ.ಕೆ.ಮಾತನಾಡುತ್ತಾ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕಾನೂನು ಹೇಗೆ ಎಲ್ಲಾ ಜನರಿಗೂ ಒಂದೇ ರೀತಿ ಅನ್ವಯವಾಗುತ್ತದೆಯೋ, ಹಾಗೆಯೇ ನಾವು ಏಡ್ಸ್ ರೋಗಿಗಳನ್ನು ಬೇರೆ ರೋಗಿಗಳ ರೀತಿಯಲ್ಲಿ ಸಮಾನವಾಗಿ ಕಾಣಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಡಾ.ಸುಧಾ ಸಿ ಓ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು, ಜಿಲ್ಲಾ ಏಡ್ಸ್ ನಿಯಂತ್ರಣ & ತಡೆ ಘಟಕ, ಚಿತ್ರದುರ್ಗ ಇವರು ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು.

ವೇದಿಕೆಯಲ್ಲಿರುವ ಗಣ್ಯರಿಂದ ಈ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಆಯ್ದ ಹನ್ನೊಂದು ಜನರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಸಾಧನ ಎ ಜಿ. ಶ್ರೀಕಾಂತ್ ಟಿ ಎನ್, ಡಾ ರೂಪಶ್ರೀ ವೈದ್ಯಾಧಿಕಾರಿಗಳು, ಡಾ ಗೋವಿಂದಪ್ಪ ಹಾಗೂ ಎಸ್.ಆರ್.ಎಸ್. ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!