Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

15 ವರ್ಷಗಳ ಬಿಜೆಪಿ ಆಡಳಿತಕ್ಕೆ ಬ್ರೇಕ್ ; ಆಪ್ ವಿಜಯದುಂದುಭಿ

Facebook
Twitter
Telegram
WhatsApp

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ.

ಬಿಜೆಪಿಯ 15 ವರ್ಷಗಳ ಜೈತ್ರಯಾತ್ರೆಗೆ ಎಎಪಿ ಬ್ರೇಕ್ ಹಾಕಿದೆ. ಎಕ್ಸಿಟ್ ಪೋಲ್‌ಗಳ ನಿರೀಕ್ಷೆಗೆ ತಕ್ಕಂತೆ ವಿಜಯದುಂದುಬಿ ಮೊಳಗಿತು. ಒಟ್ಟು 250 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಹುಮತಕ್ಕೆ 126 ಸ್ಥಾನಗಳು ಬೇಕಿದ್ದು ಅದರಲ್ಲಿ ಎಎಪಿಗೆ 134 ಸ್ಥಾನಗಳು ಲಭಿಸಿವೆ. ಇನ್ನೊಂದೆಡೆ, ಬಿಜೆಪಿ 103 ಸೀಟು ಗೆದ್ದರೆ,  ಕಾಂಗ್ರೆಸ್ ಕೇವಲ 10 ಸ್ಥಾನಗಳಿಗೆ ಸೀಮಿತವಾಗಿದೆ. ಇತರರು 3 ಸ್ಥಾನಗಳನ್ನು ಗೆದ್ದಿದ್ದಾರೆ.

ದೆಹಲಿ ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿನ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ‘ದಿಲ್ಲಿಯಲ್ಲಿ 15 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಕೇಜ್ರಿವಾಲ್ ಕಿತ್ತೆಸೆದಿದ್ದಾರೆ. ಇದೀಗ ಎಂಸಿಡಿಯಲ್ಲಿ ಬಿಜೆಪಿ 15 ವರ್ಷಗಳ ಆಡಳಿತಕ್ಕೆ ತೆರೆಬಿದ್ದಿದೆ. ದೆಹಲಿಯ ಜನರು ದ್ವೇಷದ ರಾಜಕಾರಣಕ್ಕೆ ಮನ್ನಣೆ ನೀಡುವುದಿಲ್ಲ ಎಂದು ಸಾಬೀತಾಗಿದೆ.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ನ ಎಲ್ಲಾ 250 ವಾರ್ಡ್‌ಗಳಿಗೆ ಡಿಸೆಂಬರ್ 4 ರಂದು ಮತದಾನ ನಡೆದಿತ್ತು. 1349 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 1958 ರಲ್ಲಿ ಸ್ಥಾಪನೆಯಾದ ಎಂಸಿಡಿಯನ್ನು 2012 ರಲ್ಲಿ ಅಂದಿನ ಸಿಎಂ ಶೀಲಾ ದೀಕ್ಷಿತ್ ಅವರು ಮೂರು ನಿಗಮಗಳಾಗಿ ವಿಂಗಡಿಸಿದರು. ನಂತರ ಮತ್ತೆ 2022 ರಲ್ಲಿ ಅವುಗಳನ್ನು ವಿಲೀನಗೊಳಿಸಲಾಯಿತು ಮತ್ತು MCD ಎಂದು ಪುನರುಜ್ಜೀವನಗೊಳಿಸಲಾಯಿತು. ಇದು ಮೇ 22 ರಿಂದ ಜಾರಿಗೆ ಬಂದಿತ್ತು. 2017 ರ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ 181 ಸ್ಥಾನಗಳನ್ನು, ಎಎಪಿ 48 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!