Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

5 ವರ್ಷಗಳಲ್ಲಿ ಪ್ರಧಾನಿ ಮೋದಿ ಪ್ರವಾಸಕ್ಕೆ ಖರ್ಚು ಮಾಡಿದ ಹಣವೆಷ್ಟು..?

Facebook
Twitter
Telegram
WhatsApp

5 ವರ್ಷಗಳಲ್ಲಿ ಪ್ರಧಾನಿ ಮೋದಿ ಪ್ರವಾಸಕ್ಕೆ ಖರ್ಚು ಮಾಡಿದ ಹಣವೆಷ್ಟು..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಾಗ ವಿದೇಶಿ ಪ್ರವಾಸಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಭಾರತದ ಜೊತೆಗೆ ಇತರ ರಾಷ್ಟ್ರಗಳ ಬಂಧವನ್ನು ಬಲಪಡಿಸಲು ವಿದೇಶಿ ಪ್ರವಾಸಗಳನ್ನು ಮಾಡುತ್ತಾ ಇರುತ್ತಾರೆ. ಇದೀಗ ಈ ಐದು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ವಿದೇಶಿ ಪ್ರವಾಸಕ್ಕೆಂದು ಮಾಡಿದ ಖರ್ಚಿನ ಬಗ್ಗೆ ಸಿಪಿಐ ಸಂಸದ ಎಳಮುರಮ್ ಕರಿಂ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿ ವಿದೇಶಿ ಪ್ರವಾಸದ ವಿವರವನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರುಳೀಧರನ್ ಅವರು ನೀಡಿದ್ದಾರೆ.

1. ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಇತ್ತೀಚಿನ ಇಂಡೋನೇಷ್ಯಾ ಭೇಟಿಯ ವೆಚ್ಚ 32,09,760 ರೂಪಾಯಿಗಳು.
2. ಸೆಪ್ಟೆಂಬರ್ 26 ಮತ್ತು 28 ರ ನಡುವೆ ಪ್ರಧಾನಿಯವರ ಜಪಾನ್ ಭೇಟಿಗೆ 23,86,536 ರೂಪಾಯಿ ವೆಚ್ಚ
3. ಈ ವರ್ಷದ ಆರಂಭದಲ್ಲಿ ಪ್ರಧಾನಿ ಮೋದಿಯವರ ಯುರೋಪ್ ಭೇಟಿಯ ವೆಚ್ಚ 2,15,61,304 ರೂಪಾಯಿಗಳು.
4. 2019 ರ ಸೆಪ್ಟೆಂಬರ್ 21 ಮತ್ತು 28 ರ ನಡುವೆ ಪ್ರಧಾನಿಯವರ ಯುಎಸ್ ಭೇಟಿಗೆ 23,27,09,000 ರೂಪಾಯಿ ವೆಚ್ಚವಾಗಿದೆ ಎಂದಿದ್ದಾರೆ.

ಈ ಭೇಟಿಗಳ ಸಮಯದಲ್ಲಿ ಭಾರತವು ಪಾಲುದಾರ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಬಲಪಡಿಸಿದೆ. ಭಾರತದ ದೃಷ್ಟಿಕೋನವನ್ನು ಜಗತ್ತಿನ ಮುಂದಿಡಲು ಮತ್ತು ಜಾಗತಿಕ ವಿಷಯಗಳಾದ ಸುಧಾರಿತ ಬಹುಪಕ್ಷೀಯತೆ, ಹವಾಮಾನ ಬದಲಾವಣೆ, ದೇಶೀಯ ಅಪರಾಧ, ಭಯೋತ್ಪಾದನೆ, ಸೈಬರ್-ಸುರಕ್ಷತೆ ಇತ್ಯಾದಿಗಳ ಬಗ್ಗೆ ಜಾಗತಿಕ ಕಾರ್ಯಸೂಚಿಯನ್ನು ರೂಪಿಸಲು ಅನುವು ಮಾಡಿಕೊಟ್ಟಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!