Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೇದಿಕೆ ಮೇಲೆ ತಬ್ಬಿಕೊಳ್ಳುವಂತೆ ಮಾಡಿದರು.. ಇಳಿದ ಮೇಲೆ ಮತ್ತದೆ ಕಿತ್ತಾಟ : ಸಿದ್ದಾರಾಮಯ್ಯ, ಡಿಕೆಶಿ ಬಗ್ಗೆ ಬಿಜೆಪಿ ಟಾಂಗ್..!

Facebook
Twitter
Telegram
WhatsApp

 

ಬೆಂಗಳೂರು: ರಾಹುಲ್ ಗಾಂಧಿ ಸ್ಟೇಜ್ ಮೇಲೆ @siddaramaiah ಮತ್ತು @DKShivakumar ರನ್ನು ತಬ್ಬಿಕೊಳ್ಳುವಂತೆ ಮಾಡಿದರೂ ಕೆಳಗಿಳಿದು ಮತ್ತದೇ ಕಿತ್ತಾಟ ಶುರು ಮಾಡುವುದನ್ನು ನೋಡಿ, ಬೇಸತ್ತು @kharge ಯವರನ್ನು ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಟ್ಟರು, ಸೋಜಿಗವೆಂದರೆ ಖರ್ಗೆಯವರೇ ಮತ್ತೊಂದು ಗುಂಪಿನ ನಾಯಕ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

ಇಬ್ಬರು ನಾಯಕರನ್ನು ದಿಲ್ಲಿಗೆ ಕರೆದು ಸಮಾಧಾನ ಮಾಡುವಷ್ಟರಲ್ಲಿ ಈಗ ಉಭಯ ನಾಯಕರ ಬಣಗಳು ಕಿತ್ತಾಟ ಶುರು ಮಾಡಿಕೊಂಡಿರುವುದು @INCIndiaಗೆ ತಲೆ ಬಿಸಿ ಶುರುವಾಗಿದೆ. ಇದು ಕಪ್ಪೆಗಳನ್ನು ಹಿಡಿದು ಕೊಳಗ ತುಂಬಿದಂತಾಗಿದ್ದು, ಇವರ ಜಗಳವನ್ನೇ ಸುಧಾರಿಸುತ್ತಿದ್ದರೆ ಚುನಾವಣೆಗೆ ಹೊರಡುವುದು ಯಾವಾಗ ಎಂಬಂತಾಗಿದೆ!

ಈಗ ಅದೇ ಕಾರಣಕ್ಕೆ @siddaramaiah ನವರ ಸುತ್ತಲೂ ತಮ್ಮ ಬೆಂಬಲಿಗರ ಕೋಟೆ ಕಟ್ಟಿದ್ದು @DKShivakumar. ಈಗ ಒಳಜಗಳ ಕೇವಲ ಡಿಕೆಶಿ v/s ಸಿದ್ದರಾಮಯ್ಯನವರ ಮಧ್ಯೆಯಷ್ಟೇ ಆಗಿರದೇ ಉಭಯ ನಾಯಕರ ಬಣಗಳ ನಡುವೆ ಹೊತ್ತಿಕೊಂಡಿದೆ. ಆಯಾ ನಾಯಕರ ಬೆಂಬಲಿಗರು ಪ್ರತಿ ಕ್ಷೇತ್ರಗಳಲ್ಲಿ ಟಿಕೆಟ್ ಜಗಳ ಶುರು ಮಾಡಿಕೊಂಡಿದ್ದಾರೆ.

ಎಲ್ಲಿ ತನಗಿಂತ ಬೆಳೆದುಬಿಡುತ್ತಾರೋ ಎಂದು @DKShivakumar ಅಧ್ಯಕ್ಷರಾಗೋದನ್ನು ತಪ್ಪಿಸಲು @siddaramaiah ಹಿಂದೆ ಆಡಿದ ಆಟಗಳು ಒಂದೆರಡಲ್ಲ. 17 ಜನ ನಾಯಕರನ್ನು ದಿಲ್ಲಿಗೆ ಕರೆದೊಯ್ದು, ಡಿಕೆಶಿಯನ್ನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬೇಡಿ ಎಂದು ಹಿಂದಿನಿಂದ ಬಾಣ ಬಿಟ್ಟಿದ್ದನ್ನು ಡಿಕೆಶಿ ಇನ್ನೂ ಮರೆತಿಲ್ಲ.

ಇವರಿಬ್ಬರ ಜಗಳದಲ್ಲಿ @DrParameshwara ಮತ್ತು @kharge ನಡುವೆ ಪೈಪೋಟಿ ಶುರುವಾಗಿದೆ. ಎಲ್ಲಿ ಖರ್ಗೆ ಬಂದುಬಿಟ್ಟಾರೋ ಎಂದು ಪರಮೇಶ್ವರ್ ಮೆಲ್ಲಗೆ ಕುರ್ಚಿಗೆ ಟವೆಲ್ ಹಾಸಿ ಕುಳಿತಿದ್ದಾರೆ. ಈ ವಿಷಯ ತಿಳಿದಿರುವ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಹೊಸ ಖೆಡ್ಡವನ್ನು ತೋಡುತ್ತಿದ್ದಾರೆ!

ಕಾಂಗ್ರೆಸ್ಗೆ “ಪವರ್ ಕ್ಯಾನ್ಸರ್” ಶುರುವಾಗಿದೆ. @siddaramaiah ಮತ್ತು @DKShivakumar ಇಬ್ಬರೂ ಒಬ್ಬರಿಗಿಂತ ಇನ್ನೊಬ್ಬರು ಪವರ್ಫುಲ್ ಎಂದು ತೋರಿಸಿಕೊಳ್ಳುವ, ಹಾಗೇ ಮುಖ್ಯಮಂತ್ರಿ ಅಭ್ಯರ್ಥಿ ನಾನೇ ಎಂಬ ಸಂದೇಶ ರವಾನಿಸುವುದರಲ್ಲೇ ತಮ್ಮ ಶಕ್ತಿ ವ್ಯಯಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!