Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೀಪಿಕಾ ಪಡುಕೋಣೆ ಪರವಾಗಿ ನಿಂತ ಪ್ರಕಾಶ್ ರಾಜ್..!

Facebook
Twitter
Telegram
WhatsApp

 

ಕಳೆದ ಕೆಲವು ದಿನಗಳಿಂದ ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಮ್ಮ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ ಅಂತ ಕೆಂಡಕಾರುತ್ತಿದ್ದಾರೆ. ಅದಕ್ಕೆಲ್ಲಾ ಕಾರಣ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಕಲರ್ ಡ್ರೆಸ್.

ಪಠಾಣ್ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆಗೆ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಜೀರೋ ಸಿನಿಮಾದ ಸೋಲಿನ ಬಳಿಕ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿರುವಂತ ಸಿನಿಮಾವಾಗಿದೆ. ಈ ಸಿನಿಮಾ ಮುಂದಿನ ವರ್ಷ ಜನವರಿ 25ಕ್ಕೆ ತೆರೆಗೆ ಬರುತ್ತಿದೆ. ಆದ್ರೆ ರಿಲೀಸ್ ಗೂ ಮುನ್ನ ವಿವಾದಕ್ಕೆ ಸಿಲುಕಿದೆ.

ಸಿನಿಮಾದಲ್ಲಿ ಬೇಷರಂ ರಂಗ್ ಗೀತೆಯೊಂದಿದೆ. ಈ ಸಾಂಗ್ ನಲ್ಲಿ ದೀಪಿಕಾ ಅವರನ್ನು ನೋಡುತ್ತಿದ್ದರೆ ಪಡ್ಡೆ ಹೈಕ್ಳ ಹಾರ್ಟ್ ಗಲಿಬಿಲಿ ಆಗೋದು ಗ್ಯಾರಂಟಿ. ಸಿಕ್ಕಾಪಟ್ಟೆ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಬೇಷರಂ ರಂಗ್ ಹಾಡಲ್ಲಿ ಬಿಕಿನಿ ತೊಟ್ಟು ಡ್ಯಾನ್ಸ್ ಮಾಡುವ ದೀಪಿಕಾ ಕಡೆಯಲ್ಲಿ ಕೇಸರಿ ಬಣ್ಣದ ಡ್ರೆಸ್ ತೊಟ್ಟು ಶಾರುಕ್ ಜೊತೆಗೆ ಡ್ಯಾನ್ಸ್ ಮಾಡುತ್ತಾರೆ. ಇದು ಹಿಂದೂಪರ ಸಂಘಟನೆಗಳನ್ನು ಕೆರಳಿಸಿದೆ.

ಸಿನಿಮಾದಿಂದ ಮೊದಲು ಹಾಡನ್ನು ಡಿಲಿಟ್ ಮಾಡಿ ಇಲ್ಲವಾದರೆ ಸಿನಿಮಾವನ್ನು ನೋಡುವುದಕ್ಕೆ ಬಿಡುವುದಿಲ್ಲ ಎಂದು ಬಾಯ್ಕಾಟ್ ಸಂಸ್ಕೃತಿಯಲ್ಲಿ ಸಿನಿಮಾ ಬ್ಯಾನ್ ಗೆ ನಿಂತಿದ್ದಾರೆ. ಇದೀಗ ಇಷ್ಟೆಲ್ಲಾ ರಾದ್ಧಾಂತವಾದ ಬಳಿಕ ನಟ ಪ್ರಕಾಶ್ ರಾಜ್ ದೀಪಿಕಾ ಪಡುಕೋಣೆ ಪರವಾಗಿ ನಿಂತಿದ್ದಾರೆ. ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ಇನ್ನು ಎಷ್ಟು ದಿನ ನಾವೂ ಇಂತಹ ಅಂಧ ಭಕ್ತರನ್ನು ಸಹಿಸಿಕೊಳ್ಳಬೇಕು. ಇದು ಬಣ್ಣದ ಕುರುಡಲ್ಲವೇ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!