Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಕ್ಷಾಂತರ ಭಕ್ತರ ನಡುವೆ ಸಾಗಿದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ : ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ಅಪಾರ ಜನಸ್ತೋಮ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.02) : ಹಿಂದೂ ಮಹಾಗಣಪತಿಯ 21 ದಿನಗಳ ಭವ್ಯ ಸಂಭ್ರಮಕ್ಕೆ ಶನಿವಾರ ತೆರೆಬಿದ್ದಿತು.

ಕೋವಿಡ್ ಕಾರಣಕ್ಕೆ ಕಳೆದ ವರ್ಷ ಕಳೆಗುಂದಿದ್ದ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ಈ ವರ್ಷ ಆ ಕರಾಳ ಛಾಯೆಯಿಂದ ಹೊರ ಬಂದಿತು.  ಜಿಲ್ಲಾಡಳಿತ ಶೋಭಾಯಾತ್ರೆ, ಡಿಜೆಗೆ ಅವಕಾಶ ನೀಡದಿದ್ದರು ಸಹ ಲಕ್ಷಾಂತರ ಭಕ್ತರು ಸಂಭ್ರಮಕ್ಕೆ ಸಾಕ್ಷಿಯಾದರು.

ಮಧ್ಯಾಹ್ನ 12.30 ರ ಸುಮಾರಿಗೆ ಶುರುವಾದ ವಿಸರ್ಜನಾ ಮೆರವಣಿಗೆ ನಿರೀಕ್ಷೆ ಮೀರಿ ಜನರು ಬಂದ ಕಾರಣ ತಡವಾಯಿತು. ಬಿಸಿಲನ್ನು ಲೆಕ್ಕಿಸದೆ ಜನರು ಮೆರವಣಿಗೆಯಲ್ಲಿ ಸಾಗಿದರು.

ಮದಕರಿನಾಯಕನ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ ಹಾಗೂ ಕನಕ ವೃತ್ತದಲ್ಲಿ ಜನತೆ ಕಿಕ್ಕಿರಿದು ಜಮಾಯಿಸಿದ್ದರು. ಪ್ರವಾಸಿ ಮಂದಿರದಿಂದ ಮೆರವಣಿಗೆ ಮುಂದೆ ಬರುತ್ತಿದ್ದಂತೆ ಕಟ್ಟಡಗಳ ಮೇಲಿದ್ದ ಜನರ ಸಂಭ್ರಮ ಮುಗಿಲು ಮುಟ್ಟಿತ್ತು.

ಎತ್ತ ತಿರುಗಿದರು ಸಹ ಜನವೋ..ಜನ ಕಂಡು ಬಂದರು. ಡಿಜೆ ಇಲ್ಲದಿದ್ದರು ಸಹ ಗಣಪತಿ ಮೆರವಣಿಗೆಗೆ ಜನರು ಆಗಮಿಸುತ್ತಾರೆ ಎಂಬುದು ಈ ಬಾರಿ ನಿಜವಾಯಿತು.

ಯುವಕ, ಯುವತಿಯರು, ಮಕ್ಕಳು, ಹಿರಿಯರು ಹೀಗೆ ಎಲ್ಲ ವಯಸ್ಸಿನವರು ಭವ್ಯ ಮೆರವಣಿಗೆಗೆ ಸಾಕ್ಷಿಯಾದರು. ಕೋವಿಡ್ ಕಾರಣಕ್ಕೆ ನೀರು, ಪ್ರಸಾದ ವಿತರಿಸದ ಕಾರಣ ಬಿಸಿಲಿಗೆ ಬಾಯಾರಿದ ಜನತೆ ಹೋಟೆಲ್‍ಗಳನ್ನು ಹುಡುಕುತ್ತಾ ಹೋಗಬೇಕಾಯಿತು. ಮುಖ್ಯ ರಸ್ತೆಯ ಹೋಟೆಲ್‍ಗಳು ಬಾಗಿಲು ಮುಚ್ಚಿದ್ದರಿಂದ ಸಮಸ್ಯೆ ಅನುಭವಿಸಿದರು.

ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಅಹಿತಕರ ಘಟನೆ ನಡೆಯದಂತೆ ಮೆರವಣಿಗೆಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಜತೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದ ತಂಡ ಸಹ ಎಲ್ಲಿಯೂ ಸಮಸ್ಯೆ ಆಗದಂತೆ ಎಚ್ಚರವಹಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!