Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಸರಾ ಆನೆ ಬಲರಾಮನಿಗೆ ಗುಂಡೇಟು ನೀಡಿದ್ದ ಸುರೇಶ್ ಬಂಧನ..!

Facebook
Twitter
Telegram
WhatsApp

 

ಮೈಸೂರು: ಬೆಳೆ ಜಮೀನಿಗೆ ಆನೆ ಬಂತು ಅಂತ ಗುಂಡೇಟು ಹೊಡೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಗುಂಡೇಟು ತಿಂದು ಚಿಕಿತ್ಸೆ ಪಡೆಯುತ್ತಿರುವ ಆನೆ ದಸರಾದಲ್ಲಿ ಭಾಗಿಯಾಗುವ ಬಲರಾಮನಾಗಿದ್ದಾನೆ. ಸದ್ಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿಯಾಗಿರುವ ಡಾ.ರಮೇಶ್ ಅವರು ಬಲರಾಮನಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಬಲರಾಮನಿಗೆ ಗುಂಡೇಟು ನೀಡಿದ್ದಂತ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಸುರೇಶ್ ನನ್ನು ಬಂಧಿಸಲಾಗಿದೆ. ಮಾಲೀಕನಿಂದ ಬಂದೂಕು ಹಾಗೂ ಕಾಟ್ರೀಜ್ ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜೊತೆಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಮೀನುಗಳಿಗೆ ಕಾಡಾನೆಗಳೆಲ್ಲಾ ದಾಳಿ ಮಾಡುತ್ತಾ ಇರುತ್ತವೆ. ಬಲರಾಮನನ್ನು ಕೂಡ ಕಾಡಾನೆ ಎಂದುಕೊಂಡು ಸುರೇಶ್ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪಿರಿಯಾಪಟ್ಟಣದ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವಂತ ಜಮೀನಿಗೆ ಬಲರಾಮ ನುಗ್ಗಿದ್ದ. ಈ ವೇಳೆ ಆನೆಯನ್ನು ಕಂಡ ಮಾಲೀಕರು ಅದಕ್ಕೆ ಗುಂಡು ಹಾರಿಸಿದ್ದಾರೆ. ಈ ಗುಂಡು ಬಲರಾಮನ ತೊಡೆ ಭಾಗಕ್ಕೆ ಬಿದ್ದಿದೆ. ಸದ್ಯ ಚಿಕಿತ್ಸೆ ನೀಡಿದ್ದು, ಬಲರಾಮ ಚೇತರಿಸಿಕೊಂಡಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!