Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ ಎಂ ಕೃಷ್ಣ ಮಾತಿನಿಂದ ಜೆಡಿಎಸ್, ಕಾಂಗ್ರೆಸ್ ಗೆ ಸಹಾಯವಾಗುತ್ತಾ..?

Facebook
Twitter
Telegram
WhatsApp

ಮಂಡ್ಯ: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಕಾಂಗ್ರೆಸ್ ತೊರೆದು ಬಿಜೆಪಿಯಲ್ಲಿ ಆಕ್ಟೀವ್ ಆಗಿದ್ದಾರೆ. ಇವರ ಸಾರಥ್ಯ ಬಿಜೆಪಿ ಗೆಲುವಿಗೆ ಬಹಳ ಮುಖ್ಯವಾಗಿದೆ. ಆದರೆ ಕೃಷ್ಣ ಅವರು ಆಡಿದ ಮಾತುಗಳು ಈಗ ರಾಜಕೀಯ ವಲಯದಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಸದ್ಯ ಬಿಜೆಪಿ ಪಕ್ಷ ಹಳೆ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿಕೊಂಡಿದೆ. ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗವನ್ನು ಈ ಬಾರಿ ಹೇಗಾದರೂ ಮಾಡಿ, ಕಬಳಿಸಬೇಕೆಂದು ಅಲ್ಲಿಯೇ ಬೃಹತ್ ವೇದಿಕೆಯಾಕಿ, ಜನಸಂಕಲ್ಪ ಯಾತ್ರೆಯನ್ನು ಮಾಡಿ ಆಗಿದೆ.

ಈ ಭಾಗದಲ್ಲಿ ಎಸ್ ಎಂ ಕೃಷ್ಣ ಅವರು ಕೂಡ ತಮ್ಮ ಹಿಡಿತವನ್ನು ಸಾಧಿಸಿದ್ದಾರೆ. ಎಸ್ ಎಂ ಕೃಷ್ಣ ಅವರು ಸ್ವಲ್ಪ ಓಡಾಡಿದ್ದರೆ ಕಮಲವನ್ನು ಅರಳಿಸುವುದು ಕಷ್ಟವೇನು ಇರಲಿಲ್ಲ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಎಸ್ ಎಂ ಕೃಷ್ಣ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.

ಮಂಡ್ಯದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯದಿಂದ ನಾನು ನಿವೃತ್ತಿಯಾಗಿ ಸುಮಾರು ದಿನಗಳೇ ಕಳೆದಿವೆ. ಆ ನಿಲುವನ್ನೇ ಈಗ ನಾನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ. ಇದು ಬಿಜೆಪಿ ನಾಯಕರಿಗೆ ನಡುಕ ಹುಟ್ಟುಹಾಕಿದ್ದು, ಕೃಷ್ಣ ಅವರ ನಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ನೋ ಡೌಟ್ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ,

error: Content is protected !!