Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರಿಬ್ಬರು ಮತ್ತೆ ಸಂಪುಟ ಸೇರಬೇಕೆಂಬ ಬಯಕೆ ಸರಿಯಿದೆ : ರಮೇಶ್ ಜಾರಕಿಹೊಳಿ, ಈಶ್ವರಪ್ಪ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ

Facebook
Twitter
Telegram
WhatsApp

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಮ್ಮ ಮೇಲೆ ಬಂದ ಆರೋಪಕ್ಕೆ ಸಚಿವ ಸ್ಥಾನವನ್ನೇ ತೊರೆದವರು. ಆದರೆ ಈಗ ಆರೋಪ ಮುಕ್ತರಾಗಿದ್ದು, ಮತ್ತೆ ಸಂಪುಟಕ್ಕೆ ಸೇರಲು ಸರ್ಕಸ್ ಮಾಡುತ್ತಿದ್ದಾರೆ. ಆದರೂ ಯಾವುದೇ ರೀತಿಯ ವರ್ಕೌಟ್ ಆಗಿಲ್ಲ. ಇಂದು ನಡೆದ ಚಳಿಗಾಲದ ಅಧಿವೇಶನಕ್ಕೂ ಗೈರಾಗಿ ರಹಸ್ಯ ಸಭೆ ನಡೆಸಿದ್ದರು.

ಈ ಬಗ್ಗೆ ಸದನದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಜೊತೆಗೆ ನಾನು ಸಂಪರ್ಕದಲ್ಲಿದ್ದೇನೆ. 13 ನಿಮಿಷಗಳ ಕಾಲ ಈಶ್ವರಪ್ಪ ಬಳಿ ಮಾತನಾಡಿದ್ದೇನೆ. ವಿಧಾನಮಂಡಲ ಅಧಿವೇಶನಕ್ಕೆ ಅವರು ಬಾರದೆ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣದಿಂದ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆಂಬ ಅವರ ಬಯಕೆ ಸರಿಯಾಗಿಯೇ ಇದೆ ಎಂದಿದ್ದಾರೆ.

ಕೆಲವೊಂದು ವಿಚಾರಗಳನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ. ಅವರಿಬ್ಬರ ವಿಚಾರಕ್ಕೆ ದೆಹಲಿಯಿಂದಾನು ಸಕಾರಾತ್ಮಕವಾದದ್ದೆ ಬಂದಿದೆ. ಆ ವಿಚಾರವನ್ನು ಅವರಿಬ್ಬರ ಜೊತೆಗೆ ಕುಳಿತು ಚರ್ಚೆ ನಡೆಸುತ್ತೇನೆ ಎಂದಿದ್ದಾರೆ. ಸಚಿವ ಸ್ಥಾನಕ್ಕೆ ಸಿಪಿ ಯೋಗೀಶ್ವರ್ ಕೂಡ ಕಾಯುತ್ತಾ ಇದ್ದಾರೆ. ಮೂರು ತಿಂಗಳಾದರೂ ಸರಿಯೇ ನಾನು ಸಚಿವರಾಗಲೇಬೇಕೆಂಬುದು ಅವರ ಬಯಕೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!