Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ವಾನುಮತದಿಂದ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದ ಹೊರಟ್ಟಿ

Facebook
Twitter
Telegram
WhatsApp

ಬೆಳಗಾವಿ: ಬಸವರಾಜ್ ಹೊರಟ್ಟಿ ಸರ್ವಾನುಮತದಿಂದ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಅಧಿಕೃತವಾಗಿ ಘೋಷಣೆಯಾಗಬೇಕಿರುವುದೊಂದೆ ಬಾಕಿಯಿದೆ. ಹೊರಟ್ಟಿ ಅವರ ಎದುರಿಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕೂಡ ಅಭ್ಯರ್ಥಿಯನ್ನು ಹಾಕದೆಯೆ ಹೊರಟ್ಟಿ ಅವರನ್ನು ಅವಿರೋಧ ಆಯ್ಕೆ ಮಾಡಿದ್ದಾರೆ.

ಜೆಡಿಎಸ್ ನಲ್ಲಿದ್ದ ಬಸವರಾಜ್ ಹೊರಟ್ಟಿ ಅವರು ಬಿಜೆಪಿಗೆ ಬಂದ ಮೇಲೆ ಏಳು ಬಾರಿ ಎಂಎಲ್ಸಿಯಾಗಿ ಗೆದ್ದಿದ್ದಾರೆ. 76 ವರ್ಷ ವಯಸ್ಸಿನ ಹೊರಟ್ಟಿ ಅವರು ಜೂನ್ 22, 2018 ರಿಂದ ಡಿಸೆಂಬರ್ 12, 2018 ಮತ್ತು ಫೆಬ್ರವರಿ 16, 2021 ರಿಂದ ಮೇ 16, 2022 ರವರೆಗೆ ಎರಡು ಸಂದರ್ಭಗಳಲ್ಲಿ ಪರಿಷತ್ತಿನ ಹಂಗಾಮಿ ಅಧ್ಯಕ್ಷರಾಗಿದ್ದರು. ಹೊರಟ್ಟಿ ಮೊದಲ ಬಾರಿಗೆ 1980 ರಲ್ಲಿ MLC ಯಾಗಿ ಆಯ್ಕೆಯಾದವರು ದಾಖಲೆಯ 8ನೇ ಬಾರಿಗೆ ಗೆಲುವಿನ ಸರಣಿ ಮುಂದುವರಿಸಿದರು.

ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ನೀರಾವರಿ ಸಚಿವ ಗೋವಿಂದ ಕಾರಜೋಳ, ಪರಿಷತ್ತಿನ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ, ಸದಸ್ಯ ಎಸ್.ವಿ. ಸಂಕನೂರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!