Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಚರತ್ನ ರಥಯಾತ್ರೆಯಲ್ಲಿ ಸುಸ್ತಾದ ಶಾಸಕ : ತೆರೆದ ವಾಹನದಲ್ಲಿ ಕುಸಿದು ಕೂತರು..!

Facebook
Twitter
Telegram
WhatsApp

ಮಂಡ್ಯ: ಚುನಾವಣೆ ಸಮೀಪಿಸುತ್ತಿದ್ದಂತೆ ಮೂರು ಪಕ್ಷಗಳು ತಮ್ಮ ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ಮುಂದುವರೆಸಿವೆ. ಜೆಡಿಎಸ್ ಪಕ್ಷ ಪಂಚರತ್ನ ರಥಯಾತ್ರೆಯ ಮೂಲಕ ಜನರನ್ನು ಸೆಲೆಯುವ ಪ್ರಯತ್ನ ನಡೆಸುತ್ತಿದೆ. ಈ ಮೂಲಕ ಜಿಲ್ಲೆ ಜಿಲ್ಲೆಗಳಿಗೂ ಜೆಡಿಎಸ್ ಪಂಚರತ್ನ ರಥಯಾತ್ರೆ ಸಾಗುತ್ತಿದೆ. ಇಂದು ಮಂಡ್ಯ ಜಿಲ್ಲೆಯಲ್ಲಿ ಯಾತ್ರೆ ಸಾಗುತ್ತಿದೆ.

ಮದ್ದೂರಿನಲ್ಲಿ ಈ ಬಾರಿ ಡಿ ಸಿ ತಮ್ಮಣ್ಣ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇವರ ಪರವಾಗಿ ಮತಬೇಟೆಯನ್ನು ಕುಮಾರಸ್ವಾಮಿ ಆರಂಭಿಸಿದ್ದಾರೆ. ಯಾತ್ರೆ ಮೂಲಕ ಜನರ ಬಳಿ ಸಾಗಿದ್ದು, ತಮ್ಮಣ್ಣನ ಬಗ್ಗೆ ಮಾತನಾಡುತ್ತಾ ಸಾಗಿದ್ದಾರೆ. ಜೆಡಿಎಸ್ ನಿಂದ ಸಂಕಲ್ಪ ಮಾಡಿರುವ ಅಭಿವೃದ್ಧಿಗಳ ಬಗ್ಗೆಯೂ ರಥಯಾತ್ರೆಯಲ್ಲಿ ಹೇಳಲಾಗುತ್ತಿದೆ.

ಹೀಗೆ ತೆರೆದ ವಾಹನದಲ್ಲಿ ಕುಮಾರಸ್ವಾಮಿ ನಿಂತು ಭಾಷಣ ಮಾಡುತ್ತಿದ್ದಾಗ ವಾಹನದಲ್ಲಿದ್ದ ಶಾಸಕ ಡಿಸಿ ತಮ್ಮಣ್ಣ ಆಯಾಸದಿಂದ ಕುಸಿದು ಕೂತಿದ್ದಾರೆ. ಬಿಸಿಲು ಬೇರೆ ಇದ್ದ ಕಾರಣ ಅವರ ಸುಸ್ತಿಗೆ ಕಾರಣವಾಗಿರಬಹುದು. ಯಾತ್ರೆಯಲ್ಲಿದ್ದವರು ಕೂಡ ಶಾಕ್ ಆಗಿದ್ದಾರೆ. ತಕ್ಷಣ ಅವರನ್ನು ವಾಹನದಲ್ಲಿಯೇ ಕೂರಿಸಿ, ವೈದ್ಯರನ್ನು ಕರೆಸಿ, ಚಿಕಿತ್ಸೆ ಕೊಡಿಸಿದ್ದಾರೆ. ಒಂದಷ್ಟು ಸಮಯ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಬಳಿಕ ಡಿಸಿ ತಮ್ಮಣ್ಣ ಅವರೇ ಜನರತ್ತ ಕೈಬೀಸಿ ನಾನು ಹುಷರಾಗಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!