Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ಮುಂದೆ ಮಾಸ್ಕ್ ಮರೆಯುವಂತಿಲ್ಲ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ಮಹಾಮಾರಿ ವೈರಸ್ ಮತ್ತೆ ಹೆಚ್ಚಾಗುತ್ತಿದೆ. ಈ ಸಂಬಂಧ ಇಂದು ಸಿಎಂ ನೇತೃತ್ವದಲ್ಲಿ ಸಭೆ ಕೂಡ ನಡೆದಿದೆ. ಕೊರೋನಾ ಹರಡದಂತೆ ಏನೆಲ್ಲಾ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸಭೆಯ ಬಳಿಕ ಮಾತನಾಡಿದ ಸಚಿವ ಸುಧಾಕರ್, ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಚೀನಾ ಸೇರಿದಂತೆ ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಈಗಾಗಲೇ 2-3 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಇದರ ಜೊತೆಗೆ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಳಾಂಗಣ ಸ್ಥಳ, ಎಸಿ ಇರುವ ಕಡೆಗಳಲ್ಲಿ ಮಾಸ್ಕ್‌ ಧರಿಸಬೇಕು ಎಂದು ಸೂಚನೆ ನೀಡಲಾಗುವುದು. ವಿದೇಶದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಈಗಾಗಲೇ ವಿಮಾನ ನಿಲ್ದಾಣದಲ್ಲಿ ಕೆಲವರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಅನೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಘಟಕಗಳನ್ನು ಅಳವಡಿಸಲಾಗಿದೆ. ಇವುಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಸಿದ್ಧತೆ ಕೈಗೊಳ್ಳಲು ಸೂಚಿಸಲಾಗುವುದು. ಜಿಲ್ಲಾಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಕೋವಿಡ್‌ಗೆ ಮೀಸಲಿಡಲು ತೀರ್ಮಾನವಾಗಿದೆ. ಖಾಸಗಿ ಆಸ್ಪತ್ರೆಯಲ್ಲೂ ಹಾಸಿಗೆ ಮೀಸಲಿಡಲು ಸೂಚಿಸಲಾಗುವುದು ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಭೆ ನಡೆಯುತ್ತಿದ್ದು, ಅಲ್ಲಿಂದ ನೀಡುವ ಮಾರ್ಗಸೂಚಿಯನ್ನು ನೋಡಿಕೊಂಡು ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.

ಕೋವಿಡ್‌ ಪ್ರಕರಣ ಕಡಿಮೆಯಾದ ಹಿನ್ನೆಲೆಯಲ್ಲಿ, ಜನರು ಮೂರನೇ ಡೋಸ್‌ನ ಲಸಿಕೆ ಪಡೆಯಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ 3 ನೇ ಡೋಸ್‌ ಲಸಿಕಾಕರಣದಲ್ಲಿ ಶೇ.20 ರಷ್ಟು ಮಾತ್ರ ಪ್ರಗತಿಯಾಗಿದೆ. ಇದಕ್ಕಾಗಿ ಎಲ್ಲಾ ತಾಲೂಕುಗಳಲ್ಲಿ ವಿಶೇಷ ಲಸಿಕಾ ಶಿಬಿರ ಏರ್ಪಡಿಸಿ, 3 ನೇ ಡೋಸ್‌ನಲ್ಲೂ ಶೇ.100 ರಷ್ಟು ಗುರಿ ತಲುಪಲು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ಲಸಿಕೆಯನ್ನು ಸಂಗ್ರಹಿಸಿಡಲು ಸೂಚಿಸಲಾಗುವುದು ಎಂದು ವಿವರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!