Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಕ್ಕಿಂನಲ್ಲಿ ಭೀಕರ ರಸ್ತೆ ಅಪಘಾತ : 16  ಮಂದಿ ಯೋಧರು ಸಾವು…!

Facebook
Twitter
Telegram
WhatsApp

ಗ್ಯಾಂಗ್ಟಾಕ್: ಭಾರತ-ಚೀನಾ ಗಡಿಯ ಸಮೀಪ ಉತ್ತರ ಸಿಕ್ಕಿಂ ನಲ್ಲಿ ಶುಕ್ರವಾರ ಸೇನಾ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದ ಪರಿಣಾಮ 16 ಮಂದಿ ಸೇನಾ ಯೋಧರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.

ಉತ್ತರ ಸಿಕ್ಕಿಂನ ಜಮಾದಲ್ಲಿ ಶುಕ್ರವಾರ ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ಟ್ರಕ್ ಅಪಘಾತಕ್ಕೀಡಾಗಿದೆ. ಈ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ. ಮೃತರಲ್ಲಿ 13 ಯೋಧರು ಮತ್ತು ಮೂವರು ಅಧಿಕಾರಿಗಳು ಸೇರಿದ್ದಾರೆ. ಗಾಯಾಳುಗಳನ್ನು ಉತ್ತರ ಬಂಗಾಳದ ಸೇನಾ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಘಾತ ವ್ಯಕ್ತಪಡಿಸಿದ್ದಾರೆ. ಯೋಧರು ದೇಶಕ್ಕೆ ನೀಡಿದ ಸೇವೆ ಅವಿಸ್ಮರಣೀಯವಾಗಿದ್ದು, ಘಟನೆಯಿಂದ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ :  ಮಧ್ಯಂತರ ಜಾಮೀನು ವಿಚಾರಣೆಗೆ ನಿರಾಕರಣೆ !

  ಸುದ್ದಿಒನ್, ನವದೆಹಲಿ, ಮೇ. 28 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಆರೋಗ್ಯ ತಪಾಸಣೆಗಾಗಿ ಏಳು ದಿನಗಳ ಕಾಲ ಮಧ್ಯಂತರ ಜಾಮೀನು ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್

ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ : 50ಕ್ಕೆ ಇಳಿಯುವ ಸಾಧ್ಯತೆಯ ಸೂಚನೆ..!

ಚಿನ್ನ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟ ಇರುವುದಿಲ್ಲ ಹೇಳಿ. ಆದರೆ ದಿನೇ ದಿನೇ ಚಿನ್ನದ ಮೇಲೆ ಬೆಲೆ ಏರಿಕೆ ಆಗುತ್ತಲೇ ಇದೆ. ಚಿನ್ನ ತೆಗೆದುಕೊಳ್ಳುವುದು ಕನಸಿನ ಮಾತಾಗಿ ಉಳಿದಿದೆ. ಆದರೂ ಚಿನ್ನಕೊಳ್ಳುವವರ ಸಂಖ್ಯೆ

ಥೈರಾಯಿಡ್ ಸಮಸ್ಯೆ ಇರುವವರು ಈ ಆಹಾರಗಳನ್ನು ಸೇವಿಸಬಾರದು….!

ಸುದ್ದಿಒನ್ : ಆಹಾರ ಕ್ರಮ ಸರಿಯಾಗಿಲ್ಲದಿದ್ದರೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಸಮಸ್ಯೆಗಳು ಸೇರಿದಂತೆ ಥೈರಾಯ್ಡ್ ಸಮಸ್ಯೆಗಳು  ಹೆಚ್ಚಾಗುತ್ತಿವೆ. ಥೈರಾಯ್ಡ್ ಸಮಸ್ಯೆ ಇರುವವರಿಗೆ ಆಹಾರ ಪದ್ಧತಿ ಬಹಳ

error: Content is protected !!