ಪಂಚರತ್ನ ಯಾತ್ರೆಗೆ ಹೋಗಿದ್ದವರಿಗೆ ಅಪಘಾತ : ಆಸ್ಪತ್ರೆಗೆ ಭೇಟಿ ನೀಡಿದ ಹೆಚ್ಡಿಕೆ…!

suddionenews
1 Min Read

ಮಂಡ್ಯ: ಜಿಲ್ಲೆ ಜಿಲ್ಲೆಯಲ್ಲೂ ಜೆಡಿಎಸ್ ಪಕ್ಷ ತನ್ನ ಪಂಚರತ್ನ ರಥಯಾತ್ರೆ ಮೂಲಕ ಜನರನ್ನು ತಲುಪುತ್ತಾ ಇದೆ. ಯಾವುದೇ ಜಿಲ್ಲೆಗೆ ರಥಯಾತ್ರೆ ಸಾಗಿದರೂ, ಅಲ್ಲಿ ಸಾವಿರಾರು ಜನ ಸೇರುತ್ತಾರೆ. ಹೀಗಾಗಿ ಪಂಚರತ್ನ ರಥಯಾತ್ರೆಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ನಿನ್ನೆ ಮಂಡ್ಯ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ನಡೆದಿದೆ.

ಈ ರಥಯಾತ್ರೆ ಮುಗಿಸಿಕೊಂಡು ಜನ ವಾಪಾಸ್ಸಾಗಿದ್ದಾರೆ. ಇಒ ವೇಳೆ ಇಬ್ಬರಿಗೆ ಅಪಘಾತವಾಗಿದೆ. ಎರಡು ಪ್ರತ್ಯೇಕ ಅಪಘಾತಗಳು ನಡೆದಿದ್ದು, ಇಬ್ಬರು ಆಸ್ಪತ್ರೆ ಸೇರಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.

ನಾಗಮಂಗಲ ತಾಲೂಕಿನ ಮೂಡಲುಕೊಪ್ಪ ಬಳಿ ಆಟೋ-ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಹನ್ನೆರಡು ಜೆಡಿಎಸ್ ಕಾರ್ಯಕರ್ತರಿಗೆ ಗಾಯವಾಗಿದೆ. ಅದರಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಇನ್ನು ಅದೇ ರಸ್ತೆಯಲ್ಲಿ ರಾತ್ರಿ ಬೈಕ್ ಬರುತ್ತಿದ್ದಾಗಲೂ ಮತ್ತೆ ಅಪಘಾತವಾಗಿದೆ. ಇದರ ಪರಿಣಾಮ ಬೈಕ್ ಸವಾರ ಆನಂದ್ ಎಂಬುವವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *