ತುಮಕೂರಿನಲ್ಲಿ 40% ಕಮೀಷನ್ ಗೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆ..!

suddionenews
1 Min Read

ತುಮಕೂರು: ಕಳೆದ ಕೆಲವು ತಿಂಗಳಿನಿಂದ ತಣ್ಣಗಾಗಿದ್ದ ಕಮಿಷನ್ ವಿಚಾರ ಇದೀಗ ತುಮಕೂರಿನಲ್ಲಿ ಮತ್ತೆ ಸದ್ದು ಮಾಡಿದೆ. ಗುತ್ತಿಗೆದಾರನೊಬ್ಬ ಕಮಿಷನ್ ದಂಧೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ. 55 ವರ್ಷದ ಪ್ರಸಾದ್ ನೇಣಿಗೆ ಶರಣಾದ ಗುತ್ತಿಗೆದಾರ.

ದೇವರಾಯನದುರ್ಗ ಪ್ರವಾಸಿ ಮಂದಿರದಲ್ಲಿ ನೇಣಿಗೆ ಶರಣಾಗಿದ್ದಾರೆ. ಪ್ರಸಾದ್ ಮೂಲತಃ ಮಧುಗಿರಿಯವರು. ಲೋಕೋಪಯೋಗಿ ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ತುಮಕೂರಿನ ಸಪ್ತಗಿರಿ ಬಡಾವಣೆಯಲ್ಲಿ ವಾಸವಾಗಿದ್ದರು. ಲೋಕೋಪಯೋಗಿ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಆದರೆ ಇಲಾಖೆಯಲ್ಲಿ ಸರಿಯಾದ ಸಮಯಕ್ಕೆ ಬಿಲ್ ಪಾವತಿಯಾಗಿಲ್ಲ.

ಸುಮಾರು ಒಂದೂವರೆ ಕೋಟಿಯಷ್ಟು ಹಣವನ್ನು ಸಾಲ‌ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *