Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೃತ್ಯಕ್ಕೆ ತನ್ನದೆ ಆದ ವೈಶಿಷ್ಟ್ಯವಿದೆ :  ಡಾ.ಕೆ.ರಾಜೀವಲೋಚನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ,ಡಿ.31 : ಎಲ್ಲಾ ಇಂದ್ರಿಯಗಳನ್ನು ಜಾಗೃತಿಗೊಳಿಸಿ ಅಭಿನಯಿಸುವ ನೃತ್ಯಕ್ಕೆ ತನ್ನದೆ ಆದ ವಿಶಿಷ್ಠತೆಯಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಕೆ.ರಾಜೀವಲೋಚನ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ತ.ರಾ.ಸು.ರಂಗಮಂದಿರದಲ್ಲಿ ಶುಕ್ರವಾರ ನಡೆದ ಅಂಜನಾ ನೃತ್ಯ ಕಲಾ ಕೇಂದ್ರದ 38 ನೇ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಅಂಜನಾ ನೃತ್ಯ ಕಲಾ ಕೇಂದ್ರದ ಶ್ರೀಮತಿ ಡಾ.ನಂದಿನಿ ಮತ್ತು ವಿದ್ವಾನ್ ಶಿವಪ್ರಕಾಶ್ ದಂಪತಿಗಳು ಸಾವಿರಾರು ವಿದ್ಯಾರ್ಥಿಗಳಿಗೆ ನೃತ್ಯ ಹೇಳಿಕೊಟ್ಟಿದ್ದಾರೆ. ಲಲಿತಕಲೆ ದೇಶದ ವಿಶೇಷ ಸಂಸ್ಕøತಿ. ಇಂತಹ ಕಲೆಯನ್ನು ಅವಲೋಕನ ಮಾಡಿದರೆ ನೃತ್ಯಕ್ಕೆ ಎಂತಹ ವಿಶೇಷತೆಯಿದೆ ಎನ್ನುವುದು ಗೊತ್ತಾಗುತ್ತದೆ.
ಭರತಮುನಿ ರಚಿಸಿರುವುದು ನಾಟ್ಯಶಾಸ್ತ್ರ. ವಿಶಾಲವಾದ ಅಭಿವ್ಯಕ್ತಿ ಈ ಕಲೆಯಲ್ಲಿದೆ. ಭಾರತೀಯ ಕಲೆ, ಪರಂಪರೆ ಮೇಲೆ ಅನೇಕ ಸಂಸ್ಕøತಿಗಳ ದಾಳಿಯಾಗಿದೆ. ಅದ್ಬುತವಾದ ಕಲಾ ಪ್ರಕಾರ ನೃತ್ಯಕ್ಕೆ ಎಲ್ಲರೂ ಸಹಕಾರ ಪ್ರೋತ್ಸಾಹ ನೀಡುವಂತೆ ಕೋರಿದರು.
ನಾಟ್ಯರಂಜಿನಿ ನೃತ್ಯ ಕಲಾಕೇಂದ್ರದ ಭರತನಾಟ್ಯ ಗುರು ವಿದ್ವಾನ್ ಜಿ.ಕಿರಣ್, ಕೊಳಲು ವಾದಕ ಗುರುರಾಜ್, ಜಾನಪದ ಹಾಡುಗಾರ ಗಂಗಾಧರ್ ಇವರುಗಳನ್ನು ಸನ್ಮಾನಿಸಲಾಯಿತು.

ಶ್ರೀಮತಿ ಡಾ.ನಂದಿನಿ, ವಿದ್ವಾನ್ ಸಿ.ಆರ್.ಶಿವಪ್ರಕಾಶ್ ವೇದಿಕೆಯಲ್ಲಿದ್ದರು.
ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ಯಾರ್ಥಿಗಳು ಅನೇಕ ಪ್ರಕಾರಗಳ ನೃತ್ಯಗಳನ್ನು ಪ್ರದರ್ಶಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!