Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RSS ಮತ್ತು BJP ನನ್ನ ಗುರುಗಳು.. ನಮ್ಮನ್ನು ಬಲಪಡಿಸಲು ಸಹಾಯ ಮಾಡುತ್ತದೆ : ರಾಹುಲ್ ಗಾಂಧಿ

Facebook
Twitter
Telegram
WhatsApp

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಈ ಯಾತ್ರೆಯಲ್ಲಿ ಭದ್ರತೆಯ ಲೋಪ ಮಾಡಿದ್ದಾರೆ ಎಂದು ಭದ್ರತಾ ಪಡೆ ದೂರಿದೆ. ಈ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ನಾನು ಭದ್ರತೆಯಲ್ಲಿ ಲೋಪ ಮಾಡಿದ್ದೇನೆ, ಪ್ರೋಟೋಕಾಲ್ ಮೀರಿದ್ದೇನೆ ಎಂದು ಭದ್ರತಾ ಪಡೆಗಳಿಂದ ಬಿಜೆಪಿ ಹೇಳಿಕೆ ನೀಡುತ್ತಿದೆ. ವಿನಾ ಕಾರಣ ನನ್ನ ಮೇಲೆ ಗೂಬೆ ಕೂರಿಸಿ, ದೂರು ದಾಖಲಿಸುತ್ತಿದೆ. ನೀವೂ ಬುಲೆಟ್ ಪ್ರೂಫ್ ವಾಹನದಲ್ಲಿ ಹೋಗಿ ಎಂದು ಗೃಹ ಸಚಿವಾಲಯದ ಹೇಳುತ್ತದೆ. ನಾನು ಅದನ್ನು ಹೇಗೆ ಮಾಡುವುದು. ಯಾತ್ರೆಯಲ್ಲಿ ಕಾಲ್ನಡಿಗೆಯಲ್ಲಿಯೇ ಸಾಗಬೇಕು. ನನ್ನ ಭದ್ರತೆಗಾಗಿ ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ.

ಬಿಜೆಪಿ ವಿರುದ್ಧ ದೇಶದೊಳಗೆ ಮೌನ ಅಲೆ ಇದೆ. ಪ್ರತಿಪಕ್ಷದ ನಾಯಕರು ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಜೊತೆಗೆ ಇದ್ದಾರೆ. ಇದು ನಮಗೆ ಯಶಸ್ವಿ ಯಾತ್ರೆಯಾಗಿದೆ. ನಿರುದ್ಯೋಗ ಮತ್ತು ಬೆಲೆ ಏರಿಕೆಯ ಸಮಸ್ಯೆಗಳು ದೇಶದಲ್ಲಿ ವ್ಯಾಪಕವಾಗಿದೆ. ಈ ಕುರಿತ ಅರಿವನ್ನು ಭಾರತ್ ಜೋಡೋ ಯಾತ್ರೆ ಮೂಡಿಸುತ್ತಿದೆ.

ಬಿಜೆಪಿ ಬಹಳಷ್ಟು ಪ್ರಚಾರಗಳನ್ನು ಮಾಡುತ್ತದೆ. ಆದರೆ ಸತ್ಯದ ವಿರುದ್ಧ ಹೋರಾಡುವುದಕ್ಕೆ ಅದರಿಂದ ಸಾಧ್ಯವಿಲ್ಲ. ಅವರ ಬಳಿ ಸಾಕಷ್ಟು ಹಣವಿದೆ. ಅವರು ಏನು ಮಾಡಿದರು ಸತ್ಯದೊಂದಿಗೆ ಹೋರಾಡುವುದಕ್ಕೆ ಸಾಧ್ಯವಿಲ್ಲ. ಆರ್ ಎಸ್ ಎಸ್ ಮತ್ತು ಬಿಜೆಪಿ ಮಾಡುವ ಟೀಕೆಗಳಿಗಾಗಿ ನಾನು ಧನ್ಯವಾದ ತಿಳಿಸುತ್ತೇನೆ. ಅವರು ನಮ್ಮ ಗುರುಗಳಿದ್ದಂತೆ. ಯಾಕಂದ್ರೆ ನಮ್ಮನ್ನು ಬಲಪಡಿಸಲು ಸಹಾಯ ಮಾಡುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!