Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಣಿಜ್ಯ ಸಿಲಿಂಡರ್ ಬೆಲೆ ಮತ್ತೆ ಏರಿಕೆ : ಕೇಂದ್ರ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್

Facebook
Twitter
Telegram
WhatsApp

ನವದೆಹಲಿ: ಹೊಸ ವರ್ಷದ ಖುಷಿಯಲ್ಲಿರುವವರಿಗೆ ತೈಲ ಕಂಪನಿ ಶಾಕ್ ನೀಡಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಒಮ್ಮೆಲೆ 25 ರುಪಾಯಿ ಹೆಚ್ಚಳ ಮಾಡಿದ್ದು, ಇಂದಿನಿಂದಾನೇ ಜಾರಿಗೆ ಬರಲಿದೆ. ಆದರೆ ಗೃಹ ಬಳಕೆ ಸಿಲಿಂಡರ್ ಮೇಲೆ ಯಾವುದೇ ತರದ ಏರಿಕೆ ಮಾಡಿಲ್ಲ.

ವಾಣಿಜ್ಯ ಬಳಕೆ ಸಿಲಿಂಡರ್ ಮೇಲೆ ಪದೇ ಪದೇ ಏರಿಕೆಯಾಗುತ್ತಿದ. ಕಳೆದ ವರ್ಷವೂ ವಾಣಿಜ್ಯ ಬಳಕೆ ಸಿಲಿಂಡರ್ ಮೇಲೆ 153 ರೂಪಾಯಿ ಏರಿಕೆ ಮಾಡಲಾಗಿತ್ತು. ವರ್ಷದ ಮೊದಲ ದಿನವೇ 25 ರೂಪಾಯಿ ಏರಿಕೆ ಮಾಡಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಗಳು ಏರಿಕೆಯಾದರೆ ಹೋಟೆಲ್, ರೆಸ್ಟೋರೆಂಟ್ ಗಳ ಆಹಾರ ಪದಾರ್ಥಗಳ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇರುತ್ತದೆ‌. ಅಷ್ಟೇ ಅಲ್ಲದೆ ಗ್ಯಾಸ್ ಬಳಕೆ‌ಮಾಡುವ ಆಟೋ, ಕ್ಯಾಬ್ ಗಳ ಬಳಕೆಯೂ ಹೆಚ್ಚಾಗಬಹುದು.ಈ ಕಾರಣಕ್ಕೆ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹ ಬಳಕೆ ಸಿಲಿಂಡರ್ ಬೆಲೆ 410 ರೂಪಾಯಿಯಿಂದ 1000ಕ್ಕೆ ಏರಿಕೆಯಾಗಿದೆ. ಇಂಧನ ಬೆಲೆಗಳಲ್ಲಿ ತ್ವರಿತ ಏರಿಕೆಯೊಂದಿಗೆ ಅಗತ್ಯ ವಸ್ತುಗಳ ದರಗಳನ್ನು ಹೆಚ್ಚಿಸಿದೆ. ಬೆಲೆಗಳ ಹೆಚ್ಚಳದಿಂದ ಆಗುವ ಎಲ್ಲಾ ಬಗೆಯ ಪರಿಣಾಮವನ್ನು ನಿಭಾಯಿಸಲು ಕುಟುಂಬಗಳು ಹೆಣಗಾಡುತ್ತಿವೆ. ಇಂಧನ ಬೆಲೆ ಏರಿಕೆಯ ಬಗ್ಗೆ ಪ್ರಶ್ನಿಸಿದಾಗ ಸರ್ಕಾರವೂ ಹಲವಾರು ಸಂದರ್ಭದಲ್ಲಿ ಕಚ್ಚಾ ತೈಲದ ಅಂತರಾಷ್ಟ್ರೀಯ ದರಗಳನ್ನು ಎತ್ತಿ ತೋರಿಸುತ್ತದೆ. ಈಗ ಅಂತರಾಷ್ಟ್ರೀಯ ದರಗಳು ಇಳಿಕೆಯಾಗಿದ್ದರು ದರ ಏಕೆ ಕಡಿತಗೊಳಿಸಿಲ್ಲ ಎಂದು ಪ್ರಶ್ನಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!