Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು : ಚಿಕಿತ್ಸೆ ಪಡೆದುಕೊಳ್ಳುವಂತೆ ಸಿಎಂ ಬೊಮ್ಮಾಯಿ ಮನವಿ

Facebook
Twitter
Telegram
WhatsApp

 

 

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಇಂದು ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಚಿವ ಗೋವಿಂದ ಕಾರಜೋಳ ಅವರು ಸ್ವಾಮೀಜಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಸ್ವಾಮೀಜಿಗೆ ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಸ್ವಾಮೀಜಿಗೆ ವೈದ್ಯರ ತಂಡ ಮಠದ ಕೊಠಡಿಯಲ್ಲಿಯೇ ಚಿಕಿತ್ಸೆ ನೀಡುತ್ತಿದೆ. ಆದರೆ ಇನ್ನು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ. ಆದರೆ ಸ್ವಾಮೀಜಿ, ರೋಗವೇನಿದ್ದರು ತನ್ನಿಂದ ತಾನೇ ವಾಸಿಯಾಗಬೇಕು ಎಂಬ ಮನಸ್ಥೈರ್ಯದಲ್ಲಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿ ಅವರು ಸ್ವಾಮೀಜಿಗೆ ಕೈ ಮುಗಿದು ಮನವಿ ಮಾಡಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಸ್ವಾಮೀಜಿಯ ಆರೋಗ್ಯ ವಿಚಾರಿಸಿದ್ದಾರೆ. ಫೋನ್ ಕಾಲ್ ಮಾಡುವ ಮೂಲಕ ಸ್ವಾಮೀಜಿಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸಿದ್ದೇಶ್ವರ ಸ್ವಾಮೀಜಿಯ ಆರೋಗ್ಯದ ಬಗ್ಗರ ಹಲವು ಊಹಾಪೋಹಗಳು ಎದ್ದಿದ್ದವು. ಇದೀಗ ಸಿಎಂ ಬೊಮ್ಮಾಯಿ ಅವರು ಆರೋಗ್ಯ ವಿಚಾರಿಸಿದ್ದು, ಹಡಚ್ಚಿನ ಚಿಕಿತ್ಸೆಗೆ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!