Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಡ ಕಲಾವಿದರಿಗೆ ಉತ್ತೇಜನ, ಪ್ರೋತ್ಸಾಹ ಕೊಡುವಲ್ಲಿ ಸರ್ಕಾರ ಸ್ಪಂದಿಸಬೇಕು : ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಚಿತ್ರದುರ್ಗ, (ಜ.02) : ಬಡ ಕಲಾವಿದರಿಗೆ ಉತ್ತೇಜನ, ಪ್ರೋತ್ಸಾಹ ಕೊಡುವಲ್ಲಿ ಸರ್ಕಾರ ಸ್ಪಂದಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಹಿತ್ಯ ಸಾಮ್ರಾಜ್ಯ ನಾಟ್ಯ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಹಯೋಗದೊಂದಿಗೆ ಕಬೀರಾನಂದಾಶ್ರಮದ ಆವರಣದಲ್ಲಿರುವ ರಂಗ ಮಂದಿರದಲ್ಲಿ ಇತ್ತೀಚೆಗೆ ನಡೆದ ಸಂಗೀತೋತ್ಸವ ಹಾಗೂ ಮಹಿಷಾಸುರ ಮರ್ಧಿನಿ ಭಕ್ತಿ ಪ್ರಧಾನ ಪೌರಾಣಿಕ ನಾಟಕ ಉದ್ಗಾಟಿಸಿ ಮಾತನಾಡಿದರು.

ಕಳೆದ ಆರು ತಿಂಗಳಿಂದ ನಿಂತಿದ್ದ ಜಿಲ್ಲೆಯ ಕಲಾವಿದರ ಮಾಶಾಸನವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ನೀಡಿರುವುದು ಕಲಾವಿದರ ಬದುಕು ಸುಧಾರಣೆಯಾದಂತಾಗಿದೆ. ಕಲಾವಿದರು ಕಷ್ಟದಲ್ಲಿರುವುದರಿಂದ ಸರ್ಕಾರದ ಜೊತೆಗೆ ಪ್ರೇಕ್ಷಕರು ಕಲಾವಿದರು ಹಾಗೂ ಸಂಗೀತಗಾರರನ್ನು ಉಳಿಸಿ ಬೆಳೆಸಬೇಕಿದೆ ಎಂದು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಜಾನಪದ ಹಾಡುಗಾರ ಡಿ.ಓ.ಮುರಾರ್ಜಿ, ಲೇಖಕ ಹೆಚ್.ಆನಂದ್‍ಕುಮಾರ್, ವಿಮಲಾಕ್ಷಿ, ತಿಪ್ಪೇರುದ್ರಣ್ಣ, ನಯನ್‍ಕುಮಾರ್, ವಿಜಯ್‍ಕುಮಾರ್, ಸಾಹಿತ್ಯ ಸಾಮ್ರಾಜ್ಯ ನಾಟ್ಯ ಸಂಘದ ಅಧ್ಯಕ್ಷೆ ಸಿ.ಕೆ.ನಳಿನ, ಟಿ.ನಾಗೇಂದ್ರ ವೇದಿಕೆಯಲ್ಲಿದ್ದರು. ಮೈಸೂರಿನ ಶಕ್ತಿ ಕನ್ನಡ ನಾಟಕ ಕಲಾ ಸಂಘದವರು ರಂಗಗೀತೆಗಳನ್ನು ಹಾಡಿದರು.

ಕೆ.ಗಂಗಾಧರ್ ಮತ್ತು ತಂಡದಿಂದ ಸುಗಮ ಸಂಗೀತ, ತುರುವನೂರಿನ ಮೈಲಾರಿ ಮತ್ತು ತಂಡದ ವಚನ ಸಂಗೀತ, ಹಿಮಂತರಾಜ ಟಿ. ಮತ್ತು ತಂಡದಿಂದ ತತ್ವಪದ ಗಾಯನ, ಜಾನಪದ ಸಂಗೀತ, ಭಕ್ತಿಗೀತೆ, ಭಾವಗೀತೆಗಳು ಪ್ರೇಕ್ಷಕರನ್ನು ರಂಜಿಸಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!