Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಲ್ಲೇಖನ ವ್ರತ ಮಾಡಿ ಪ್ರಾಣ ತ್ಯಾಗ ಮಾಡಿದ ಸ್ವಾಮೀಜಿ : ವೀರೇಂದ್ರ ಹೆಗ್ಗಡೆ ಸಂತಾಪ

Facebook
Twitter
Telegram
WhatsApp

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ನಿಧನಕ್ಕೆ ಭಕ್ತರು, ಬೆಂಬಲಿಗರು ಸಹಸ್ರಾರು ಸಂಖ್ಯೆಯಲ್ಲಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇದೀಗ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದ್ದಾರೆ.

“ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ದೇಹತ್ಯಾಗ ಮಾಡಿದ ವಿಚಾರ ತಿಳಿಯಿತು. ಮಹಾನ್ ಚಿಂತಕರು, ಮಹಾನ್ ತತ್ವಜ್ಞಾನಿಗಳು, ಶ್ರೀಸಾಮಾನ್ಯರಿಗೆ ಜೀವನಾದರ್ಶಗಳನ್ನು ತಿಳಿಸಿ ಮಾರ್ಗದರ್ಶನ ಕೊಟ್ಟವರು. ಜನಜೀವನವನ್ನು ಅತ್ಯಂತ ಹತ್ತಿರದಿಂದ ಕಂಡವರು. ಅದೇ ಮನಸ್ಸಿನಿಂದ ಜನಸಾಮಾನ್ಯರಲ್ಲಿ ಬದಲಾವಣೆಯನ್ನು ತಂದವರು. ಅದಕ್ಜೆ ಮಾರ್ಗದರ್ಶನಗಳನ್ನು ನೀಡಿದವರು. ತಮ್ಮ ಪ್ರವಚನದ ಮೂಲಕ ಸಮಾಜದ ಓರೆ ಕೋರೆಗಳನ್ನು ತಿದ್ದಿದವರು”.

ಅವರ ಪ್ರವಚನಗಳಲ್ಲಿ ನಾನು ಅವರನ್ನು ಕಂಡಂತೆ ಭಾಷಣದ ಭೀಕರತೆಯನ್ನು ತೋರದೆ ಎಲ್ಲಾ ಧರ್ಮದ ಸಾರಸತ್ವವನ್ನು ಆಳವಾಗಿ ತಿಳಿದುಕೊಂಡು ತಮ್ಮ ಪ್ರವಚನಗಳನ್ನು ಅತ್ಯಂತ ಸರಳವಾಗಿ, ಪ್ರಸ್ತುಪಡಿಸಿ, ಚಿತ್ತಾಕರ್ಷಿಸಿ ತಮ್ಮ ಪ್ರಭಾವವನ್ನು ಬೀರುತ್ತಿದ್ದರು. ಪೂಜ್ಯರು ಜೈನ ಧರ್ಮದ ಸಲ್ಲೇಖನ ವ್ರತವನ್ನು ಅನುಕರಿಸಿದ್ದರಿಂದ ಬಹುತೇಕ ತಮ್ಮ ಕೊನೆಯ ಭಾಗದಲ್ಲಿ ಆಹಾರ-ಜಲ ತ್ಯಾಗ ಮಾಡಿ ದೇಹ ತ್ಯಾಗ ಮಾಡಿದರು. ಅತ್ಯಂತ ಸರಳ ಜೀವಿ. ಪೂಜ್ಯಶ್ರೀ ಸಿದ್ದೇಶ್ವರ ಎಶ್ವರ ಶ್ರೀಗಳ ಚಿಂತನೆ ಸದಾ ನಮ್ಮೊಂದಿಗೆ ಇರಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

error: Content is protected !!