Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜ.9ಕ್ಕೆ ಮತ್ತೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ : ವರ್ತೂರು ಪ್ರಕಾಶ್ ಗೆ ಸೆಡ್ಡು

Facebook
Twitter
Telegram
WhatsApp

ಕೋಲಾರ: ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರ ಇನ್ನು ಕಗ್ಗಂಟಾಗಿಯೇ ಉಳಿದಿದೆ. ಆದರೆ ಕೋಲಾರದಲ್ಲಿ ನಿಲ್ಲಬಹುದು ಎಂಬ ಲೆಕ್ಕಾಚಾರ ಜೋರಾಗಿದೆ. ಕೋಲಾರದಲ್ಲಿ ನಿಲ್ತಾರೋ ಇಲ್ವೋ ಪಕ್ಕಾ ಮಾಹಿತಿ ಇಲ್ಲ. ಆದರೆ ಹವಾ ಅಂತು ಶುರುವಾಗಿದೆ. ಯಾಕಂದ್ರೆ ನವೆಂಬರ್ 13ರಂದು ಸಿದ್ದರಾಮಯ್ಯ ಅವರು ಅದ್ಯಾವಾಗ ಕೋಲಾರಕ್ಕೆ ಭೇಟಿ ನೀಡಿದರೋ, ಜನ ಸಾಗರವೇ ಹರಿದು ಬಂದಿತ್ತು. ಆ ಜನಸಾಗರ ನೋಡಿ ಇದೀಗ ಸಿದ್ದರಾಮಯ್ಯ ಅವರು ಮತ್ತೆ ಕೋಲಾರಕ್ಕೆ ಭೇಟಿ ನೀಡುವ ಮನಸ್ಸು ಮಾಡಿದ್ದಾರೆ.

ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ ನೀಡಲಿದ್ದಾರೆ. ನಗರದ ಬಾಸ್ಕೆಟ್ ಬಾಲ್ ಕ್ರೀಡಾಂಗಣದಲ್ಲಿ ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಈ ಸಭೆಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಕೋಲಾರ ವಿಧಾನಸಭಾ ಕ್ಷೇತ್ರದ 23 ಪಂಚಾಯತ್ ಕಾಂಗ್ರೆಸ್ ಮುಖಂಡರು ಕೂಡ ಕಾರ್ಯಕ್ರಮದಲ್ಲಿ ಇರಲಿದ್ದಾರೆ.

ಇದೇ ಪ್ರವಾಸದ ಸಮಯದಲ್ಲಿ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ನಿಲ್ಲಲಿದ್ದಾರಾ ಎಂಬ ಪ್ರಶ್ನೆಗೆ ಉತ್ತರವೂ ಸಿಗಲಿದೆ. ಇತ್ತಿಚೆಗಷ್ಟೇ ವರ್ತೂರು ಪ್ರಕಾಶ್ ಸವಾಲೊಂದನ್ನು ಹಾಕಿದ್ದರು. ಐದು ಸಾವಿರ ಜನರನ್ನು ಸೇರಿಸಲು ಇಲ್ಲಿನ ನಾಯಕರಿಂದ ಆಗುವುದಿಲ್ಲ ಎಂದು ಲೇವಡಿ ಮಾಡಿದ್ದರು. ಇದೊಇಗ ಆ ಸವಾಲಿಗೆ ಸೆಡ್ಡು ಹೊಡೆಯಲು ಸಿದ್ದರಾಮಯ್ಯ ಟೀಂ ರೆಡಿಯಾಗಿದೆ. ಬೃಹತ್ ವೇದಿಕೆ ಸಿದ್ಧತೆ ಮಾಡಿದ್ದು, ವೇದಿಕೆ ಮೂಲಕವೇ ಉತ್ತರ ಕೊಡಲು ರೆಡಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!