Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಸೇರ್ಪಡೆ ಬಗ್ಗೆ ಸಂಸದೆ ಸುಮಲತಾ ಪ್ರತಿಕ್ರಿಯೆ ನೀಡಿದ್ದು ಹೀಗೆ..!

Facebook
Twitter
Telegram
WhatsApp

ಮಂಡ್ಯ: ನಟಿ ಸುಮಲತಾ ಮಂಡ್ಯದಲ್ಲಿ ಚುನಾವಣೆಗೆ ನಿಂತಾಗಲೂ ಬಿಜೆಪಿ ನಾಯಕರು ಪರೋಕ್ಷವಾಗಿ ಬೆಂಬಲ ನೀಡಿದ್ದರು. ಗೆಲುವು ಸಾಧಿಸಿದ ಬಳಿಕ ಸುಮಲತಾ ಬಿಜೆಪಿಗೇನೆ ಹೋಗ್ತಾರೆ ಎಂಬ ಚರ್ಚೆ ಜೋರಾಗಿ ನಡೆದಿತ್ತು. ಆದ್ರೆ ಅದಕ್ಕೆ ಸುಮಲತಾ ಅಂದು ಕೂಡ ಕ್ಲಾರಿಟಿ ನೀಡಿದ್ದರು. ನಾನು ಬಿಜೆಪಿಗೆ ಹೋಗಲ್ಲ ಅಂತ. ಈಗ 2023ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈಗಲೂ ಅದೇ ವಿಚಾರ ಚರ್ಚೆಗೆ ಬಂದಿದೆ. ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎಂಬುದು.

ಈ ಬಗ್ಗೆ ಸುಮಲತಾ ಮತ್ತೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸೇರ್ಪಡೆಯ ಬಗ್ಗೆ ನಾನು ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡಿದ್ದಾರೆ. ಆದರೆ ನಾನಿನ್ನು ಚರ್ಚೆ ಮಾಡಿಲ್ಲ. ಸದ್ಯಕ್ಕೆ ಬಿಜೆಪಿ ಸೇರುವ ಯಾವ ಯೋಚನೆಯೂ ಇಲ್ಲ. ಫ್ಲೆಕ್ಸ್ ನಲ್ಲಿ ಫೋಟೋ ಹಾಕಿಕೊಳ್ಳುತ್ತಾರೆ. ಅದು ಅವರವರ ಅಭಿಮಾನಕ್ಕೆ ಎಂದಿದ್ದಾರೆ.

ಸಚ್ಚಿದಾನಂದಗೆ ನನ್ನ ಬೆಂಬಲವಿದೆ ಎಂಬುದು ಸೀಕ್ರೇಟ್ ಆಗಿ ಏನು ಉಳಿದಿಲ್ಲ. ನನ್ನ ಬೆಂಬಲ ಖಂಡಿತ ಸಚ್ಚಿದಾನಂದ ಅವರಿಗೆ ಇದೆ. ಅದನ್ನು ಓಪನ್ ಆಗಿಯೇ ಘೋಷಣೆ ಮಾಡಿಕೊಂಡಿದ್ದೇನೆ. ಹೀಗಾಗಿ ಸಚ್ಚಿದಾನಂದ ಫ್ಲೆಕ್ಸ್ ನಲ್ಲಿ ನನ್ನ ಫೋಟೋ ಹಾಕಿಕೊಂಡಿದ್ದಾರೆ. ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಬೇಡಿ ಎಂದಿದ್ದಾರೆ.

ಬಿಜೆಪಿ ನಾಯಕರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಕೂಡ ಅಳವಡಿಕೆ ಮಾಡಲಾಗಿತ್ತು. ಈ ವಿಚಾರವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಸುಮಲತಾ ಮಾತನಾಡಿದ್ದು, ಪಕ್ಷ ಸೇರ್ಪಡೆಯ ಬಗ್ಗೆ ನಾನು ಇನ್ನು ಯಾವುದೇ ತೀರ್ಮಾನ ಮಾಡಿಲ್ಲ. ನಾನು ಹೋದ ಕಡೆಯಲ್ಲೆಲ್ಲಾ ಜನ ಪಕ್ಷ ಸೇರ್ಪಡೆ ಬಗ್ಗೆ ಕೇಳುತ್ತಾರೆ. ಜೊತೆಗೆ ಜನರು ಹೀಗೆ ಇರಿ ಅಂತಾನೂ ಹೇಳ್ತಾ ಇದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!