Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನಾಯಕರಿಗೆ ಅವಾಜ್ ಹಾಕಿ ಪಕ್ಷ ಬಿಟ್ಟ ಕೆಜಿಎಫ್ ಬಾಬು..!

Facebook
Twitter
Telegram
WhatsApp

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿಯೇ ಇಂದು ಕೆಜಿಎಫ್ ಬಾಬು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೋರು ಗಲಾಟೆ ನಡೆದಿದೆ. ಈ ವೇಳೆ ಕೆಜಿಎಫ್ ಬಾಬು ಆಕ್ರೋಶ ಹೊರ ಹಾಕಿದ್ದಾರೆ. ಗಲಾಟೆ ವಿಚಾರ ತಿಳಿದ ಬಳಿಕ ರಾಜ್ಯದ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಪ್ರತಿಕ್ರಿಯೆ ನೀಡಿ, ಪಕ್ಷದ ಕಚೇರಿಯಲ್ಲಿ ನಿಂತು ಪಕ್ಷಕ್ಕೆ ಚ್ಯುತಿ ಬರುವಂತೆ ವರ್ತಿಸಿದ್ದಾರೆ. ಅವರನ್ನು ಕೂಡಲೇ ವಜಾ ಮಾಡಬೇಕೆಂದು ಆದೇಶಿಸಿದ್ದಾರೆ.

ಈ ಆದೇಶಕ್ಕೆ ಕೆಜಿಎಫ್ ಬಾಬು ಪ್ರತಿಕ್ರಿಯೆ ನೀಡಿದ್ದು, ನಾನು ರಾಜ್ಯದಲ್ಲಿ ಕಾಂಗ್ರೆಸ್ ಬರಬೇಕು ಅಂತ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ನನ್ನನ್ನು ಒಳಗೆ ಬಿಡದಂತೆ ಹೇಳಿದ್ದರು. ಸಲೀಂ ಅಹ್ಮದ್ ಕೈನಲ್ಲಿ ಏನು ಆಗುತ್ತೆ..? ಅವರ ಹಿಂದೆ ನಾಲ್ಕು ಜನ ಇಲ್ಲ. ಸಲೀಂ ಅಹ್ಮದ್ ಅವನು ಯಾರು..? ಮುಸಲ್ಮಾನು ಅಲ್ಲ, ಅವನಿಗೆ ಯಾರು ವೋಟು ಕೊಡಲ್ಲ. ನಾನು ಪಕ್ಷದಿಂದ ಅಲ್ಲ, ಪಕ್ಷ ನನ್ನಿಂದ ಇರೋದು. ನೀವೇನ್ ತೆಗೆಯೋದು, ನಾನೇ ಬಿಡ್ತೇನೆ ಎಂದಿದ್ದಾರೆ.

ನಾನು ಚಿಕ್ಕಪೇಟೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಪ್ರತಿ ಮನೆಗೆ ಮನೆ, ಮನೆಗೆ ಐದು ಸಾವಿರ ಖರ್ಚು ಮಾಡಿದ್ದೇನೆ. ಇದಕ್ಕಾಗಿ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ. ನಾನು ಮೂರು ಸಾವಿರ ಮನೆ ಕಟ್ಟಿಕೊಟ್ಟಿದ್ದೇನೆ. 180 ಕೋಟಿ ಹಣ ಖರ್ಚು ಮಾಡಿದ್ದೇನೆ. ಇದನ್ನ ಯಾರೂ ಧೈರ್ಯವಾಗಿ ಹೇಳುವುದಿಲ್ಲ. ಬಡವರು ಬಡವರಾಗಿಯೇ ಇರಬೇಕಾ..? ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!