Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸೇರುವ ಮುನ್ನವೇ ಕಿಚ್ಚನಿಗೆ ಗಾಳ ಹಾಕುತ್ತಿರುವ ಬಿಜೆಪಿ ನಾಯಕರು..!

Facebook
Twitter
Telegram
WhatsApp

ಇಂದು ಬೆಳಗ್ಗೆಯಿಂದ ಸುದೀಪ್ ರಾಜಕೀಯಕ್ಕೆ ಸೇರುತ್ತಾರೆ ಎಂಬ ಸುದ್ದಿಯೇ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಸುದೀಪ್ ಜೊತೆಗೆ ನಟಿಸಿದ್ದ ರಮ್ಯಾ ಅವರನ್ನು ಕಾಂಗ್ರೆಸ್ ಈ ವಿಚಾರಕ್ಕೆ ಮುಂದೆ ಬಿಟ್ಟಿದೆ ಎಂಬ ಸುದ್ದು ಬಂದಿದ್ದೆ ತಡ, ಈಗ ಮೂರು ಪಕ್ಷಗಳು ಸುದೀಪ್ ಅವರನ್ನು ತಮ್ಮತ್ತ ಸೆಲೆಯುವುದಕ್ಕೆ ಯತ್ನಿಸುತ್ತಿವೆ.

ಸುದೀಪ್ ಮೂರು ಪಕ್ಷದಲ್ಲೂ ಗುರುತಿಸಿಕೊಂಡಿದ್ದಾರೆ. ಅದರಲ್ಲೂ ಬಿಜೆಪಿಯಲ್ಲಿ ಸಿಎಂ ಬೊಮ್ಮಾಯಿ ಅವರೇ ಆತ್ಮೀಯರಾಗಿದ್ದಾರೆ. ಎಲ್ಲಿಯೇ ಸಿಕ್ಕಿದರೂ ಮಾಮ ಎಂದೇ ಕರೆಯುವ ಸುದೀಪ್, ಎಲ್ಲಿಯೇ ಕಂಡರೂ ದೀಪು ಎಂದು ಕರೆಯುವ ಸಿಎಂ ಬೊಮ್ಮಾಯಿ ಅವರು. ಕಾಂಗ್ರೆಸ್ ತಮ್ಮ ಪಕ್ಷಕ್ಕೆ ಆಹ್ವಾನ ನೀಡುತ್ತಿದೆ ಎನ್ನುವಾಗಲೇ ಬಿಜೆಪಿ ಪಕ್ಷ ಅಲರ್ಟ್ ಆಗಿದೆ. ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಯತ್ನಿಸುತ್ತಿದೆ. ಅದು ಆಗದೆ ಇದ್ದಲ್ಲಿ ಸ್ಟಾರ್ ಪ್ರಚಾರಕರನ್ನಾಗಿ ಆದರೂ ಕರೆತರಲು ಸೂಚನೆ ನೀಡಿದೆ.

ಅತ್ತ ಜೆಡಿಎಸ್ ನಲ್ಲೂ ಸಾರಾ ಮಹೇಶ್ ಈ ಯತ್ನವನ್ನು ಮಾಡುತ್ತಿದ್ದಾರೆ. ಸುದೀಪ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯುವುದಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಆದರೆ ಕಿಚ್ಚ ಸುದೀಪ್ ಮನಸ್ಸು ಯಾರತ್ತ ವಾಲುತ್ತದೆ ಎಂಬುದೇ ಈಗ ಕುತೂಹಲದ ಪ್ರಶ್ನೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!