Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಂದೆಯಾಗುತ್ತಿದ್ದೀರಾ ಎಂದು ವಿಶ್ ಮಾಡಿದವರಿಗೆ ಚಂದನ್ ಶೆಟ್ಟಿ ಕೊಟ್ಟ ಉತ್ತರವೇನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲೆಲ್ಲಾ ನಿನ್ನೆಯಿಂದ ರ್ಯಾಪರ್, ನಟ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪೇರೆಂಟ್ಸ್ ಆಗುತ್ತಿದ್ದಾರೆ ಎಂಬುದೇ ದೊಡ್ಡ ಸುದ್ದಿಯಾಗಿತ್ತು. ಎಲ್ಲರೂ ತಮ್ಮ‌ಮನೆಯ ಸಂಭ್ರಮವೇನೋ ಎಂಬಂತೆ ಖುಷಿ ಪಟ್ಟರು, ವಿಶ್ ಮಾಡಿದರು. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗೆ ಶುಭವಾಗಲಿ ಎಂದು ಹರಸಿದರು. ಆದರೆ ಇದು ಸತ್ಯವೋ.. ಸುಳ್ಳೋ ಎಂಬುದನ್ನು ಇಂದು ಚಂದನ್ ಶೆಟ್ಟಿ ಅವರೇ ಪ್ರೂವ್ ಮಾಡಿದ್ದಾರೆ.

 

ನಿನ್ನೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಡಿಯೋವೊಂದನ್ನು ಮಾಡಿದ್ದರು. ಅದರಲ್ಲಿ Fat+Her=..? ಎಂಬಂತ ಕ್ಯಾಪ್ಶನ್ ಕೊಟ್ಟು ವಿಡಿಯೋ ಅಪ್ಲೋಡ್ ಮಾಡಿದ್ದರು. ಚಂದನ್ ಶೆಟ್ಟಿ‌ ಕೇಳಿದ ಪ್ರಶ್ನೆಗೆ ನಿವೇದಿತಾ ಗೌಡ ಫನ್ನಿ ಫನ್ನಿಯಾಗಿಯೇ ಉತ್ತರ ನೀಡುತ್ತಿದ್ದರು. ಆದರೆ ಅಭಿಮಾನಿಗಳೆಲ್ಲಾ, Fat+Her= Father ಎಂದೇ ಉತ್ತರ ನೀಡಿದ್ದರು. ಅಭಿನಂದನೆಗಳನ್ನು ಹೇಳಿದ್ದರು.

ಚಂದನ್ ಶೆಟ್ಟಿಗೆ ಅಭಿಮಾನಿಗಳು ಮಾತ್ರವಲ್ಲ ಆಪ್ತರು ಕೂಡ ಫೋನ್ ಮಾಡುವ ಮೂಲಕ, ಸಂದೇಶಗಳನ್ನು ಕಳುಹಿಸುವ ಮೂಲಕ ವಿಶ್ ಮಾಡಿದ್ದಾರೆ. ಇದು ಸೀರಿಯಸ್ ಆಗುವ ಮುನ್ನ ಚಂದನ್ ಶೆಟ್ಟಿ ಉತ್ತರ ನೀಡಿದ್ದಾರೆ. “ನಾನು ತಂದೆಯಾಗುತ್ತಿಲ್ಲ. ಅದು ರೀಲ್ಸ್ ಅಷ್ಟೇ‌. ನಾವೂ ಇನ್ನೂ ಮಗುವಿಗೆ ಸಿದ್ಧರಿಲ್ಲ. ಮಗುವಿನ ನಿರೀಕ್ಷೆಯಲ್ಲಿದ್ದಾಗ ಖಂಡಿತವಾಗಿಯೂ ಘೋಷಿಸುತ್ತೇವೆ” ಎಂದಿದ್ದಾರೆ. ಈ ರೀತಿ ದಂಪತಿಗೆ ವಿಶ್ ಮಾಡುತ್ತಿರುವುದು ಎರಡನೇ ಬಾರಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!