Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಲ ತೀರಿಸುವುದಕ್ಕೆ ಸಿದ್ದರಾಮಯ್ಯ ಅವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ರಾ ಶ್ರೀನಿವಾಸ್ ಗೌಡ..?

Facebook
Twitter
Telegram
WhatsApp

ಈ ಬಾರಿ ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಘೋಷಣೆಯನ್ನು ಮಾಡಿದ್ದಾರೆ. ಈ ಬೆನ್ನಲ್ಲೇ ಶ್ರೀನಿವಾಸ್ ಗೌಡ ಅವರದ್ದೇ ಆದ ಆಡಿಯೋವೊಂದು ವೈರಲ್ ಆಗಿದೆ.

ಆಪ್ತರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಆಡಿಯೋದಲ್ಲಿ 17 ಕೋಟಿ ಸಾಲ ತೀರಿಸುವುದಕ್ಕೋಸ್ಕರ ಕೋಲಾರ ಕ್ಷೇತ್ರವನ್ನು ನಾನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಟ್ಟೆ. ಸಿದ್ದರಾಮಯ್ಯ ಅವರು ಗೆದ್ದ ಮೇಲೆ ಕ್ಷೇತ್ರದ ಕಡೆ ಹೇಗೂ ಬರಲ್ಲ. ಆಗ ನನ್ನದೇ ಕಾರುಬಾರು. ಸಿದ್ದರಾಮಯ್ಯ ಅವರು ಗೆದ್ದರು ಕೂಡ ಕ್ಷೇತ್ರದಲ್ಲಿ ಓಡಾಡುವುದು ನಾನೇ ಎಂದು ಈ ಆಡಿಯೋದಲ್ಲಿ ಹೇಳಿದ್ದಾರೆ. ಇದು ಕೋಲಾರದಲ್ಲೆಲ್ಲಾ ವೈರಲ್ ಆಗಿದೆ.

ನೀವೇ ಅಭ್ಯರ್ಥಿ ಆಗಬೇಕು ಎಂಬ ಆಸೆ ಇತ್ತು ಎಂದು ಆಪ್ತರೊಬ್ಬರು ಕೇಳಿದ ಪ್ರಶ್ನೆಗೆ ಶ್ರೀನಿವಾಸ್ ಗೌಡ ಅವರು, “ಹೋದ ಸಲ 17 ಕೋಟಿ ಖರ್ಚು ಮಾಡಿದ್ದೀನಿ. ಯಾರು ಸಹಾಯ ಮಾಡುತ್ತಾರೆ ಹೇಳು. ನೀವೂ ಅದನ್ನು ಕೊಟ್ರಿ ನಾನು ತೀರಿಸಿದೆ. ನನ್ನ ಎಂಎಲ್ಸಿ ಮಾಡಿ, ಮಂತ್ರಿ ಮಾಡುತ್ತಾರೆ. ಈಗಲೂ ಅದು ಶ್ರೀನಿವಾಸ್ ಗೌಡರದ್ದೇ. ಎಲ್ಲರಿಗೂ ಹೇಳು ಅದನ್ನು. ಕ್ಷೇತ್ರದಲ್ಲಿ ನಾನೇ ಓಡಾಡುವುದು. ಅವರು ಗೆದ್ದ ಮೇಲೆ ಮುಖ್ಯಮಂತ್ರಿ ಆಗುತ್ತಾರೆ. ಅದಕ್ಕೆ ನಾನು ಒಪ್ಪಿಕೊಂಡೆ. ಈಗ ಕ್ಷೇತ್ರ ಬಿಟ್ಟುಕೊಟ್ಟುಬಿಟ್ಟಿದ್ದೀನಿ” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!