Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಕ್ಕರ್ ಬಾಂಬ್ ಸ್ಪೋಟ : ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ವಿಚಾರಣೆ..!

Facebook
Twitter
Telegram
WhatsApp

ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ಈ ಸಂಬಂಧ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಅವರನ್ನು ವಿಚಾರಣೆ ನಡೆಸಿದೆ. ಶಾರೀಖ್ ಅಜ್ಜನಿಗೆ ಸಂಬಂಧಿಸಿದ ಜಾಗದಲ್ಲಿ ಕಾಂಗ್ರೆಸ್ ಕಚೇರಿಯನ್ನು ತೆರೆಯಲಾಗಿದೆ. ಹೀಗಾಗಿ ಇಡಿ ಅಧಿಕಾರಿಗಳು ದಿಢೀರನೆ ಕಿಮ್ಮನೆ ರತ್ನಾಕರ್ ಅವರ ಕಚೇರಿಗೆ ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ.

ಈ ಕಚೇರಿಯನ್ನು ಆರಂಭಕ್ಕೂ ಮುನ್ನವೇ ಕಿಮ್ಮನೆ ರತ್ನಾಕರ್ ಅವರ ಸಂಬಂಧಿಕರ ಹೆಸರಿನಲ್ಲಿ ಅಗ್ರಿಮೆಂಟ್ ಮಾಡಲಾಗಿತ್ತಂತೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಇಡಿ ಅಧಿಕಾರಿಗಳು, ತನಿಖೆಗಾಗಿ ಕಿಮ್ಮನೆ ಅವರ ಕಚೇರಿಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ ಪ್ರತಿ ತಿಂಗಳು 10 ಸಾವಿರ ಬಾಡಿಗೆಯಂತೆ ನಿಗದಿ ಮಾಡಲಾಗಿತ್ತಂತೆ. ಅದರಂತೆ, ಶಾರಿಖ್ ಅವರ ಕುಟುಂಬದ ಅಕೌಂಟ್ ಗೆ ಹಾಕಲಾಗುತ್ತಿತ್ತಂತೆ.

ಇನ್ನು ಈ ಸಂಬಂಧ ಮುಂದಿನ ಜೂನ್ ತಿಂಗಳಲ್ಲಿ ಅಗ್ರಿಮೆಂಟ್ ಅಂತ್ಯವಾಗಲಿದೆಯಂತೆ. ಹೀಗಾಗಿಯೇ ಅಡ್ವಾನ್ಸ್ ವಾಪಾಸ್ ಮಾಡುವುದಕ್ಕೆ ಸೂಚನೆ ಕೂಡ ನೀಡಿದ್ದಾರಂತೆ. ಅಡ್ವಾನ್ಸ್ ವಾಪಾಸ್ ನೀಡಿದರೆ ಆಫೀಸ್ ಖಾಲಿ ಮಾಡುವುದಾಗಿ ಕಿಮ್ಮನೆ ರತ್ನಾಕರ್ ಹೇಳಿದ್ದಾರಂತೆ. ಈ ಬಗ್ಗೆ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಇನ್ನು ಶಾರೀಖ್ ನ ಹಣ ಮತ್ತು ಆಸ್ತಿ ಮೂಲವನ್ನು ತಿಳಿದುಕೊಳ್ಳಲು ಅಧಿಕಾರಿಗಳು ಶಿವಮೊಗ್ಗದ ತೀರ್ಥಹಳ್ಳಿಗೂ ಭೇಟಿ ನೀಡಲಿದ್ದಾರಂತೆ. ಇನ್ನು ಶಿವಮೊಗ್ಗದ ಸೊಪ್ಪುಗುಡ್ಡೆಯ ಮನೆಗೂ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!