Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಪಕ್ಷವು ಒಕ್ಕಲಿಗರು, ಲಿಂಗಾಯತರ ಪಕ್ಷ ಎಂದ ಡಿಕೆಶಿಗೆ ಖಡಕ್ ಪ್ರಶ್ನೆ ಹಾಕಿದ ಹೆಚ್’ಡಿಕೆ

Facebook
Twitter
Telegram
WhatsApp

ಬೆಂಗಳೂರು: ಜೆಡಿಎಸ್ ಕೇವಲ ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಬಿಡದಿಯ ತೋಟದಲ್ಲಿ ನಡೆದಿರುವ ಜನತಾ ಪರ್ವ 1.O ಹಾಗೂ ಮಿಷನ್ 123 ಯ ಆರನೇ ದಿನದ ಕಾರ್ಯಾಗಾರದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೀವು ಎಷ್ಟು ಸಮುದಾಯಗಳಿಗೆ ಗೌರವ ಕೊಟ್ಟಿದ್ದೀರಿ? ನಿಮ್ಮ ಪಕ್ಷದ ದಲಿತ ಸಮಾಜದ ನಾಯಕರನ್ನು ಚುನಾವಣೆಯಲ್ಲಿ ಸೋಲಿಸಿದವರು ಯಾರು? ಪಟ್ಟಿ ದೊಡ್ಡದಾಗಿದೆ, ಒಮ್ಮೆ ನೋಡಿಕೊಳ್ಳಿ ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಅಡ್ಡಿ ಬರುತ್ತಾರೆಂದು ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಕಾರಣ ಯಾರು? ಧರ್ಮಸಿಂಗ್ ಅವರ ಸೋಲಿಗೆ ಕಾರಣ ಯಾರು? ಕೋಲಾರದಲ್ಲಿ ಕೆ.ಹೆಚ್. ಮುನಿಯಪ್ಪ ಅವರನ್ನು ಸೋಲಿಸಿದವರು ಯಾರು? ಬಿಜೆಪಿಗೆ ಶಕ್ತಿಯೇ ಇಲ್ಲದ ಹಾಗೂ ಕಾರ್ಪೊರೇಟರ್ ಕೂಡ ಆಗಲು ಆಗದಂತಹ ವ್ಯಕ್ತಿಯನ್ನು ಕರೆತಂದು ಕೋಲಾರದಲ್ಲಿ ನಿಲ್ಲಿಸಿ ಪ್ರತ್ಯಕ್ಷವಾಗಿ, ಬೆಂಬಲ ನೀಡಿದವರು ಯಾರು? ರಮೇಶ್ ಕುಮಾರ್ ಯಾರ ಪರ ಕೆಲಸ ಮಾಡಿದರು. ಅಲ್ಲಿನ ಬಿಜೆಪಿ ಸಂಸದರ ಆಯ್ಕೆ ಹಿಂದೆ ಯಾರಿದ್ದಾರೆ? ಎಂದು ಡಿಕೆಶಿಗೆ ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣವಲ್ಲವೇ? ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!