Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಹೈಕೋರ್ಟ್ ತಡೆ : ಸಿಎಂ ವಿರುದ್ಧ ಬೇಸರಗೊಂಡ ಬಸವಜಯ ಮೃತ್ಯುಂಜಯ ಸ್ವಾಮೀಜಿ..!

---Advertisement---

ಹಾವೇರಿ: ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ಮುಂದಿನ ತೀರ್ಮಾನದವರೆಗೂ ಯಥಾ ಸ್ಥಿತಿ ಕಾಪಾಡಿಕೊಳ್ಳುವುದಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಯಾವ ತೀರ್ಮಾನವನ್ನು ಮಾಡುವುದಕ್ಕೆ ಆಗುವುದಿಲ್ಲ. ಈ ಸಂಬಂಧ ಇದೀಗ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ ಹೊರ ಹಾಕಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ವಿಚಾರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಾಯಿ ಮೇಲೆ ಆಣೆ ಮಾಡಿ ಮಾತು ಕೊಟ್ಟಿದ್ದರು. ಆದರೆ ಈಗ ಅವರು ಮಾತು ತಪ್ಪಿದ್ದಾರೆ. ಆದರೆ 2C, 2D ಹೊಸ ಪ್ರವರ್ಗ ರಚನೆ ಮಾಡಿದ್ದಾರೆ. ನಮಗೆ 2ಎ ಮೀಸಲಾತಿ ನೀಡಬೇಕು. 2ಡಿ ಮೀಸಲಾತಿಯಲ್ಲಿ ಏನಿದೆ ಎಂದು ಪ್ರಶ್ನಿಸಿದ್ದಾರೆ.

ಅಸಂವಿಧಾನಿಕವಾಗಿ ನಿರ್ಣಯ ತೆಗೆದುಕೊಂಡಿದ್ದರು. ಎಷ್ಟು ಮೀಸಲಾತಿ ಕೊಡುತ್ತೀವಿ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿರಲಿಲ್ಲ. ನಾವೂ ಕೇಳಿದ್ದು 2ಎ ಮೀಸಲಾತಿ, ಆದರೆ ಅವರು ನೀಡಿದ್ದು, 2ಡಿ ಮೀಸಲಾತಿ. ತಾಯಿಯ ಮೇಲೆ ಪ್ರಮಾಣ ಮಾಡಿ ಮಾತು ತಪ್ಪಿದ್ದಾರೆ. ಒಂದು ದಿನ ಸಾಂಕೇತಿಕವಾಗಿ ಸತ್ಯಾಗ್ರಹ ಮಾಡಿದ್ದೇವೆ. ನಮ್ಮ ನೋವು ಏನು ಎಂಬುದನ್ನು ಇಂದು ನಾವೂ ತೋರಿಸಲಿದ್ದೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...