Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾವಿನ ಮನೆಯಲ್ಲಿ ರಾಹುಲ್ ಗಾಂಧಿ ನಗುತ್ತಿದ್ದಾರೆ : ಕಿಡಿಕಾರಿದ ಬಿಜೆಪಿ

Facebook
Twitter
Telegram
WhatsApp

ನವದೆಹಲಿ : ಸಮಾಜವಾದಿ ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರ ಕುಟುಂಬಕ್ಕೆ ಸಾಂತ್ವನ ಹೇಳುವಾಗ ನಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಾರತೀಯ ಜನತಾ ಪಕ್ಷದ ವಕ್ತಾರ ಶೆಹಜಾದ್ ಪೂನವಾಲಾ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

2018 ರಲ್ಲಿ ಕರ್ನಾಟಕದ ಮಾಜಿ ಸಿಎಂ ಎನ್ ಧರಂ ಸಿಂಗ್ ಅವರ ಸಂತಾಪ ಸೂಚಕ ಸಭೆಯಲ್ಲಿ ಕೂಡಾ ರಾಹುಲ್ ನಗುತ್ತಿದ್ದರು. ಆ ಸಂದರ್ಭದಲ್ಲಿ ‌ತೆಗೆದ ಫೋಟೋಗಳನ್ನು ಸಹಾ ಪೂನಾವಾಲಾ ಅವರು ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂತಾಪ ಸೂಚಿಸುವ ಸಂದರ್ಭದಲ್ಲಿ
ನಗುತ್ತಿರುವ ಚಿತ್ರಗಳನ್ನು ಹಂಚಿಕೊಂಡು, ಬಿಜೆಪಿ ರಾಷ್ಟ್ರೀಯ ವಕ್ತಾರರು ಟ್ವೀಟ್ ಮಾಡಿದ್ದಾರೆ, “ಶರದ್ ಯಾದವ್ ಅವರ ಕುಟುಂಬ ಕಣ್ಣೀರು ಸುರಿಸುತ್ತಿರುವಾಗ ರಾಹುಲ್ ಗಾಂಧಿ ನಗುತ್ತಿದ್ದಾರೆ.

2018 ರಲ್ಲಿಯೂ ಇದೇ ರೀತಿ ಧರಂ ಸಿಂಗ್ ಅವರ ಸಂತಾಪ ಸೂಚಕ ಸಭೆಯಲ್ಲಿ ರಾಹುಲ್ ನಗುತ್ತಿದ್ದರು; ಪುಲ್ವಾಮಾ ಶ್ರದ್ಧಾಂಜಲಿ ಸಮಯದಲ್ಲಿ ಫೋನ್‌ನಲ್ಲಿ ಬ್ಯುಸಿಯಾಗಿದ್ದರು ಎಂದು ಬಿಜೆಪಿ ಕಿಡಿ ಕಾರಿದೆ.

ನಿನ್ನೆ(ಗುರುವಾರ) ರಾತ್ರಿ ನಿಧನರಾದ ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಅವರಿಗೆ ದೆಹಲಿಯ ತಮ್ಮ ನಿವಾಸದಲ್ಲಿ ರಾಹುಲ್ ಗಾಂಧಿ ಶ್ರದ್ಧಾಂಜಲಿ ಸಲ್ಲಿಸಿದರು. “ಶರದ್ ಯಾದವ್ ಜಿ ಅವರಿಂದ ನಾನು ರಾಜಕೀಯದ ಬಗ್ಗೆ ಸಾಕಷ್ಟು ಕಲಿತಿದ್ದೇನೆ. ಇಂದು ಅವರ ನಿಧನ ನನಗೆ ದುಃಖ ತಂದಿದೆ. ಅವರು ನನ್ನ ‘ತಂದೆಯ’ ಜೊತೆ ಉತ್ತಮ ಸಂಬಂಧವನ್ನು ಹೊಂದಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಹಿರಿಯ ರಾಜಕಾರಣಿ ಮತ್ತು ಮಾಜಿ ಜೆಡಿಯು ಮುಖ್ಯಸ್ಥ ಶರದ್ ಯಾದವ್ ಗುರುವಾರ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ ವಯಸ್ಸು 75. ಅವರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!