Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯರನ್ನು ಸೋಲಿಸಲು ಸೈಲೆಂಟ್ ಆಗಿ ಅಖಾಡಕ್ಕೆ ಇಳಿದಿದ್ದಾರಾ ಇಬ್ರಾಹಿಂ, ಪ್ರಜ್ವಲ್..?

---Advertisement---

ಕೋಲಾರ: ಈ ಬಾರಿಯ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಕಡೆಗೂ ಕೋಲಾರದಲ್ಲಿ ನಿಲ್ಲುವುದಾಗಿ ಘೋಷಣೆ ಮಾಡಿದ್ದಾರೆ. ವರುಣ ಅಥವಾ ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದರೆ ಬಿಜೆಪಿಯಿಂದ ಟಫ್ ಕಾಂಪೀಟೇಷನ್ ನೋಡಬಹುದಿತ್ತು. ಆದರೆ ಸಿದ್ದರಾಮಯ್ಯ ಕೋಲಾರ ಆಯ್ಕೆ ಮಾಡಿಕೊಂಡಿದ್ದರಿಂದ ಆ ಸ್ಪರ್ಧೆ ತಪ್ಪಿದೆ. ಈಗ ಜೆಡಿಎಸ್ ಹಠ ಮಾಡಿದಂತೆ ಕಾಣುತ್ತಿದೆ.

ಕೋಲಾರದಲ್ಲಿ ಹೇಗಾದರೂ ಮಾಡಿ ಸಿದ್ದರಾಮಯ್ಯ ಅವರನ್ನು ಸೋಲಿಸಲೇಬೇಕೆಂದು ಜೆಡಿಎಸ್ ರಣತಂತ್ರ ಎಣೆಯುತ್ತಿದೆ. ಯಾಕಂದ್ರೆ ಇದು ದಳಪತಿಗಳ ಭದ್ರಕೋಟೆಯೇ ಆಗಿದೆ. ಕಲೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಈ ಬಾರಿ ಇನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಬೇಕೆಂಬ ಲೆಕ್ಕಾಚಾರದಲ್ಲಿ ಇದೆ ಜೆಡಿಎಸ್.

ಈ ಬಗ್ಗೆ ತಮ್ಮ ಅಭಿಪ್ರಾಯ ಹೊರ ಹಾಕಿರುವ ಸಿ ಎಂ ಇಬ್ರಾಹಿಂ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೆಲವರ ಬಲವಂತದಿಂದ ಇಲ್ಲಿಗೆ ಬಂದು ನಿಲ್ಲುತ್ತಿದ್ದಾರೆ. ಮುನಿಯಪ್ಪ ಸೋತಂತೆ ಸಿದ್ದರಾಮಯ್ಯ ಕೂಡ ಸೋಲುತ್ತಾರೆ. ಕೋಲಾರ ಜಿಲ್ಲೆ ಕಾಂಗ್ರೆಸ್ ಮುಕ್ತವಾಗಲಿದೆ. ಮುಸ್ಲಿಂ ಸಮುದಾಯದವರನ್ನು ತುಳಿದ ಕಾಂಗ್ರೆಸ್ ನವರನ್ನು ಅಲ್ಪಸಂಖ್ಯಾತರು ಕೈಹಿಡಿಯುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಕೂಡ ಕೋಲಾರ ಕ್ಷೇತ್ರದ ಬಗ್ಗೆ ಮಾತನಾಡಿ, ಕೋಲಾರ ಜಿಲ್ಲೆಗೂ ನಮ್ಮ ಕುಟುಂಬಕ್ಕೂ ನಂಟಸ್ತನವಿದೆ. ಅದು ತಲತಲಾಂತರದಿಂದ ನಡೆದುಕೊಂಡು ಬಂದಿದೆ. ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಆ ಭಾಗದಿಂದಾನೇ ಸ್ಪರ್ಧೆ ಮಾಡುವುದಾಗಿ ಒಮ್ಮೆ ಹೇಳಿದ್ದರು. ಸಿದ್ದರಾಮಯ್ಯ ಅವರು ಅಲ್ಲಿ ಸ್ಪರ್ಧೆ ಮಾಡುವುದು ಅವರ ವೈಯಕ್ತಿಕ ವಿಚಾರ. ಆದ್ರೆ ಅವರದ್ದೇ ಪಾರ್ಟಿಯವರು ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ ಎಂದು ಬೇಸರ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...