Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ಶ್ರೀಮುರುಳಿ ಕಾಲಿಗೆ ಶಸ್ತ್ರ ಚಿಕಿತ್ಸೆ : ಎಷ್ಟು ತಿಂಗಳು ವಿಶ್ರಾಂತಿಯಲ್ಲಿರಬೇಕು..?

---Advertisement---

‘ಮದಗಜ’ ಸಕ್ಸಸ್ ಬಳಿಕ ನಟ ಶ್ರೀಮುರುಳಿ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಜೊತೆಗೂಡಿ ‘ಬಘೀರ’ ಸಿನಿಮಾಗೆ ಸಹಿ ಹಾಕಿದ್ದರು. ಮುಹೂರ್ತ ಕಂಡಿದ್ದನ್ನು ನೋಡಿದರೆ ಇಷ್ಟೊತ್ತಿಗೆ ಸಿನಿಮಾ ಥಿಯೇಟರ್ ಗೆ ಬರಬೇಕಿತ್ತೇನೋ. ಆದರೆ ಅದ್ಯಾಕೋ ಸಿನಿಮಾ ತುಂಬಾನೇ ತಡವಾಗಿದೆ.

ಹಾಗೋ ಹೀಗೋ ಇನ್ನೊಂದು ಎರಡು ದಿನದ ಶೂಟಿಂಗ್ ಇತ್ತು. ಮುಗಿಸಿ ಥಿಯೇಟರ್ ಗೆ ಬರಬೇಕು ಎನ್ನುವಷ್ಟರಲ್ಲಿ ನಟ ಶ್ರೀಮುರುಳಿಗೆ ಪೆಟ್ಟಾಗಿದೆ. ಶೂಟಿಂಗ್ ವೇಳೆ ಕಾಲಿಗೆ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇದೀಗ ವೈದ್ಯರು ನಟ ಶ್ರೀಮುರುಳಿ ಕಂಡೀಷನ್ ಬಗ್ಗೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದಾರೆ.

ಮೊಣಕಾಲಿಗೆ ಗಂಭೀರ ಗಾಯವಾಗಿದ್ದ ಕಾರಣ ಇಂದು ಮಧ್ಯಾಹ್ನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಇನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಉಳಿಯಬೇಕಾಗಿದೆ. ಜೊತೆಗೆ ಡಿಸ್ಚಾರ್ಜ್ ಆದ ಬಳಿಕವೂ ಹೆಚ್ಚು ಓಡಾಡುವಂತಿಲ್ಲ ಎಂದು ನಟ ಶ್ರೀಮುರುಳಿಗೆ ವೈದ್ಯರು ಎಚ್ಚರಿಕೆಯನ್ನು ನೀಡಿದ್ದಾರೆ‌. ಸುಮಾರು ಆರು ತಿಂಗಳುಗಳ ಕಾಲ ಡ್ಯಾನ್ಸ್, ಫೈಟ್ ಮಾಡಂಗಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...