Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ – ಬಿಜೆಪಿಯಿಂದ ಒಂದೇ ಯೋಜನೆ : ಯಾರ ಪರ ನಿಲ್ತಾರೆ ಗೃಹಲಕ್ಷ್ಮೀಯರು..?

Facebook
Twitter
Telegram
WhatsApp

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಜನರಿಗೆ ಹತ್ತಿರವಾಗುವುದಕ್ಕೆ ನೋಡುತ್ತವೆ. ಮಹಿಳೆಯರ ಮತಗಳನ್ನು ಸೆಳೆಯುವುದಕ್ಕೆ ನಿನ್ನೆ ಕಾಂಗ್ರೆಸ್ ಪಕ್ಷ ಮಹಿಳಾ ಮಣಿಯರಿಗಾಗಿ ನಾ ನಾಯಕಿ ಎಂಬ ಕಾರ್ಯಕ್ರಮ ಮಾಡಿ, ಅವರಿಗಾಗಿ ಒಂದಷ್ಟು ಘೋಷನೆಯನ್ನು ಮಾಡಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಹಣವನ್ನು ನೀಡುವುದಾಗಿ ತಿಳಿಸಿತ್ತು. ಇದೀಗ ಬಿಜೆಪಿ ಕೂಡ ಇದೇ ರೀತಿಯ ಆಶ್ವಾಸನೆ ನೀಡುವ ಯೋಜನೆಯಲ್ಲಿದೆ. ಹೀಗಾಗಿ ಇಬ್ಬರಲ್ಲಿ ಈ ಯೋಜನೆಯನ್ನು ಕಾಪಿ ಮಾಡಿದವರು ಯಾರು ಎಂಬುದೇ ತಿಳಿಯುತ್ತಿಲ್ಲ. ಕಾಂಗ್ರೆಸ್ ಘೋಷಣೆ ಮಾಡುವುದಕ್ಕೂ ಮುನ್ನವೇ ಸಿಎಂ ಬೊಮ್ಮಾಯಿ ಅವರು ಘೋಷಣೆ ಮಾಡಿಯಾಗಿತ್ತು.

ಅರಮನೆ ಮೈದಾನದಲ್ಲಿ ನಾ ನಾಯಕಿ ಎಂಬ ಅದ್ಧೂರಿ ಕಾರ್ಯಕ್ರಮವನ್ನು ಮಾಡಿತ್ತು. ಅದಕ್ಕೆ ಪ್ರಿಯಾಂಕ ಗಾಂಧಿ ಆಗಮಿಸಿದ್ದರು. ಈ ವೇಳೆ ಮಹಿಳೆಯರಿಗೆ ಪ್ರತಿ ತಿಂಗಳು ಹಣ ನೀಡುವ ಬಗ್ಗೆ ಘೋಷಣೆ ಮಾಡಿ, ಮಹಿಳೆಯರ ಮತ ಸೆಳೆಯುವ ಪ್ರಯತ್ನವಂತು ನಡೆಯಿತು. ಇದೀಗ ಇದಕ್ಕೆ ಉತ್ತರವಾಗಿ ಬಿಜೆಪಿ ಕೂಡ ಈ ಬಾರಿಯ ಬಜೆಟ್ ನಲ್ಲಿ ಬಿಪಿಎಲ್ ಕುಟುಂಬದ ಮಹಿಳೆಯರಿಗೆ 2 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡುವ ಪ್ಲ್ಯಾನ್ ನಲ್ಲಿದೆ ಎನ್ನಲಾಗಿದೆ.

ಇನ್ನು ಫೆಬ್ರವರಿ ಮೂರನೇ ವಾರದಲ್ಲಿಯೇ ಬಜೆಟ್ ಮಂಡನೆಯಾಗಲಿದೆ ಎನ್ನಲಾಗುತ್ತಿದೆ. ಬಜೆಟ್ ಮೂಲಕ ಮತದಾರರನ್ನು ಸೆಳೆಯುವ ಯತ್ನವಾಗಲಿದೆ ಎನ್ನಲಾಗುತ್ತಿದೆ. ಕುಟುಂಬದ ಅಗತ್ಯವನ್ನು ನೋಡಿಕೊಂಡು ಸಾವಿರ, ಒಂದೂವರೆ ಸಾವಿರ, ಎರಡು ಸಾವಿರ ಹೀಗೆ ಹಣ ನೀಡಲು ನಿರ್ಧರಿಸಿದೆ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!