Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪನವರಿಗೆ ಸಿದ್ದರಾಮ ಸಾಹಿತ್ಯ ಪ್ರಶಸ್ತಿ ಪ್ರದಾನ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.18): ಕರ್ನಾಟಕ ರಾಜ್ಯದ ನೊಳಂಬ ಲಿಂಗಾಯತ ಸಂಘ 12 ನೇ ಶತಮಾನದ ಶರಣ ಸಿದ್ದರಾಮೇಶ್ವರನ ಸಾಹಿತ್ಯ ಕುರಿತು ಕೆಲಸ ಮಾಡಿದವರಿಗೆ ಕೊಡ ಮಾಡುವ ಸಿದ್ದರಾಮ ಸಾಹಿತ್ಯ ವಿಶೇಷ ಪ್ರಶಸ್ತಿ ಚಿತ್ರದುರ್ಗದ ಇತಿಹಾಸ ಸಂಶೋಧಕ ಹಾಗೂ ಶಾಸನತಜ್ಞ ಡಾ.ಬಿ.ರಾಜಶೇಖರಪ್ಪನವರಿಗೆ ಲಭಿಸಿದೆ.

ಕಳೆದ 14 ರಂದು ತಿಪಟೂರಿನಲ್ಲಿ ನಡೆದ ಶ್ರೀ ಗುರುಸಿದ್ದರಾಮೇಶ್ವರರ 850 ನೇ ಜಯಂತಿ ಸುವರ್ಣ ಮಹೋತ್ಸವ-2023 ರ ಅಂಗವಾಗಿ ಏರ್ಪಡಿಸಿದ್ದ ಸಮ್ಮೇಳನದಲ್ಲಿ ಡಾ.ಬಿ.ರಾಜಶೇಖರಪ್ಪನವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೆರೆಗೋಡಿ ರಂಗಾಪುರ ಮಠದ ಪರದೇಶಿಕೇಂದ್ರ ಮಹಾಸ್ವಾಮಿ, ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಮಂತ್ರಿ ಶೋಭ ಕರಂದ್ಲಾಜೆ, ಶಿಕ್ಷಣ ಮಂತ್ರಿ ಬಿ.ಸಿ.ನಾಗೇಶ್ ಇವರುಗಳು ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಿದರು.

ಪ್ರಶಸ್ತಿಯು ಹತ್ತು ಸಾವಿರ ರೂ.ನಗದು, ಸನ್ಮಾನ ಪತ್ರ, ಸ್ಮರಣಿಕೆ ಒಳಗೊಂಡಿದೆ.
ಕೆರೆಗೋಡಿ ರಂಗಾಪುರ ಮಠದ 89 ವರ್ಷದ ಎಸ್.ಪರಶಿವಮೂರ್ತಿ ಮತ್ತು ಅವರ ಮಗ ಶಿವಕುಮಾರ್ ಹಾಗೂ ಚಂದ್ರಶೇಖರ್ ಇವರುಗಳು ತಮ್ಮ ತಾಯಿ ತಂದೆಯರ ಹೆಸರಿನಲ್ಲಿ ಸ್ಥಾಪಿಸಿರುವ ಟ್ರಸ್ಟ್ ಮೂಲಕ ಹಲವು ವರ್ಷಗಳಿಂದಲೂ ಸಿದ್ದರಾಮ ಸಾಹಿತ್ಯ ವಿಶೇಷ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!