Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆಸಿಆರ್ ಗೆ ಬೆಂಬಲವಾಗಿ ನಿಂತ್ರು ದೆಹಲಿ, ಕೇರಳ, ಪಂಜಾಬ್ ಸಿಎಂ : ಬಿಜೆಪಿ ವಿರುದ್ಧ ಗೆಲ್ಲುತ್ತಾ BRS..!

Facebook
Twitter
Telegram
WhatsApp

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಇಂದು ಪ್ರಧಾನಿ ವಿರುದ್ಧ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಖಮ್ಮಮ್ ನಲ್ಲಿ ಬೃಹತ್ ಸಮಾವೇಶ ನಡೆಸಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2014ರಿಂದಲೂ ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಿರುವ ಕೆಸಿಆರ್, 2018ರ ವಿಧಾನಸಭಾ ಚುನಾವಣೆಯಲ್ಲೂ ಗಮನ ಸೆಳೆದಿದ್ದರು.

ಇತ್ತಿಚೆಗೆ ತಮ್ಮದೇ ರಾಷ್ಟ್ರೀಯ ಪಕ್ಷವನ್ನು ಆರಂಭಿಸಿದ್ದಾರೆ. ಬಿಆರ್ಎಸ್ ಎಂಬ ಪಕ್ಷವನ್ನು ಆರಂಭಿಸಿದ್ದು, ಅಂದು ದೆಹಲಿಯಲ್ಲಿ ಪಕ್ಷ ಉದ್ಘಾಟನೆ ಮಾಡಿದಾಗ, ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ ಮಾತ್ರ ಇದ್ದರು. ಆದರೆ ಇಂದು ಮೆಗಾ ಪಬ್ಲಿಕ್ ಸಮಾವೇಶದಲ್ಲಿ ಮುಖ್ಯಮಂತ್ರಿಗಳ ದಂಡೇ ಹರಿದು ಬಂದಿದೆ. ಕೆ ಚಂದ್ರಶೇಖರ್ ರಾವ್ ಗೆ ಮಹಾಪೂರ ಬೆಂಬಲ ಸಿಕ್ಕಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಸಿಪಿಐ ನ್ಯಾಷನಲ್ ಸೆಕ್ರೆಟರಿಡಿ ರಾಜಾ ಸೇರಿದಂತೆ ಹಲವು ರಾಜಕೀಯ ಗಣ್ಯರು ಬೆಂಬಲಕ್ಕೆ ನಿಂತಿದ್ದಾರೆ.

ಬಿಜೆಪಿ ಅಧಿಕಾರ ಉರುಳಲು ಇನ್ನು ಹೆಚ್ಚಿನ ದಿನ ಉಳಿದಿಲ್ಲ. ಕೇವಲ 400 ದಿನಗಳು ಮಾತ್ರ ಬಾಕಿ ಇದೆ. ಇಂದಿನಿಂದ ಅವರ ಸಮಯ ಶುರುವಾಗಿದೆ. ಇನ್ನು ಉಳಿದಿರುವುದು 399 ದಿನಗಳು ಮಾತ್ರ ಅಂತ ಅಖಿಲೇಶ್ ಯಾದವ್ ಎಚ್ಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!