Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರು ಪ್ರಯತ್ನಿಸಬೇಕು : ಬಿಇಒ ತಿಪ್ಪೇಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ, (ಜ‌.19) :  ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಗಣನೀಯವಾದದ್ದು, ಅವರ ಶಿಕ್ಷಣದಲ್ಲಿ ಗುಣಾತ್ಮಕವಾದಂತ ಬದಲಾವಣೆ ತರಲು ಶಿಕ್ಷಕರು ಅವಿರತವಾಗಿ ಪ್ರಯತ್ನಿಸಬೇಕು, ಜಿಲ್ಲೆಯ ಫಲಿತಾಂಶ ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಬರುವಂತಹ ಪ್ರಯತ್ನಗಳಾಗಬೇಕು ಎಂದು ಬಿ ಇ ಓ ತಿಪ್ಪೇಸ್ವಾಮಿಯವರು ನುಡಿದರು.

ಅವರು ರೋಟರಿ ಕ್ಲಬ್ ಚಿತ್ರದುರ್ಗ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಆದಿಶೇಷ ರೋಟರಿ ಭವನ, ಮರುಳಪ್ಪ ಬಡಾವಣೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಮಾತನಾಡುತ್ತಿದ್ದರು.

ಪರೀಕ್ಷ ಸಮಯ ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳನ್ನು ಉತ್ತಮ ಫಲಿತಾಂಶ ತರುವಂತೆ ತರಬೇತಿಗೊಳಿಸಬೇಕು. ಗುಣಾತ್ಮಕ ಶಿಕ್ಷಣ ಮತ್ತು ಗುಣಾತ್ಮಕ ಫಲಿತಾಂಶದ ಕಡೆಗೆ ನಮ್ಮ ಗಮನವಿರಬೇಕು ಎಂದು ಕರೆ ನೀಡಿದರು.

ರೊಟೇರಿಯನ್ ಪಿ ಎಚ್ ಎಫ್ ವಿಶ್ವಜಿತ್ ಜಾದವ್ ಡಿ ಎಲ್ ಸಿ ಸಿ ಆರ್ ಐ ಡಿ 3160 ದಾವಣಗೆರೆ ಮಾತನಾಡುತ್ತಾ ಶಾಲೆಯಲ್ಲಿ ಎಷ್ಟೇ ಸೌಕರ್ಯಗಳಿದ್ದರೂ ಸಹ ಉತ್ತಮ ಶಿಕ್ಷಕರು ಇಲ್ಲದಿದ್ದರೆ ಕಲಿಕೆಯಲ್ಲಿ ಗುಣಾತ್ಮಕವಾದ ಬದಲಾವಣೆ ತರುವುದು ಕಷ್ಟಕರ, ಹಾಗಾಗಿ ತರಬೇತಿ ಹೊಂದಿದ ಶಿಕ್ಷಕರಿಗೆ ಹೆಚ್ಚು ಆದ್ಯತೆ ನೀಡಿದಷ್ಟು ಮಕ್ಕಳಲ್ಲಿ ಕಲಿಕೆ ಹೆಚ್ಚು ಆಗುವುದು ಎಂದರು.

ರೋ. ಹರಿಸರ್ವೋತ್ತಮ್ ಚೇರ್ಮನ್, ಲಿಟರಿಸಿ ಕಮಿಟಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಶಿಕ್ಷಕರಲ್ಲಿ ತರಬೇತಿ ನೀಡುವುದರಿಂದ ಮಕ್ಕಳಲ್ಲಿ ಉನ್ನತ ವಿಚಾರಗಳು ಚಿಂತನೆಗಳು ಮೂಡುತ್ತದೆ ಅದಕ್ಕಾಗಿ ರೋಟರಿ ಸಂಸ್ಥೆ ಅವಿರತವಾಗಿ ಪ್ರಯತ್ನಿಸುತ್ತಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ರೋ. ಪಿ ಎಚ್ ಎಫ್, ಎಂ ಕೆ ರವೀಂದ್ರ, ಡಿಸ್ಟ್ರಿಕ್ಟ್ ಗೌರ್ನರ್, ರೋ ಪಿಎಚ್ಎಫ್ ಗಾಯತ್ರಿ ಶಿವರಾಂ, ರೋ ಮಾಧುರಿ ಮಧು ಪ್ರಸಾದ್, ರೋಟರಿ ಕ್ಲಬ್ ಪ್ರೆಸಿಡೆಂಟ್, ರೋ ಡಾಕ್ಟರ ಮಧುಸೂದನ್ ರೆಡ್ಡಿ ಪ್ರೆಸಿಡೆಂಟ್ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್, ರೋ. ಜಯಶ್ರೀ ಶಾ, ಕಾರ್ಯದರ್ಶಿ, ರೋ ಜೆ ಅಶೋಕ್ ಕುಮಾರ್ ಕಾರ್ಯದರ್ಶಿ, ರೋ ಎಂ ಜೆ ರಾಘವೇಂದ್ರ ಚೇರ್ಮನ್ ಲಿಟರಸಿ ಕಮಿಟಿ, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ಇನ್ನಿತರ ರೋಟರಿ ಕ್ಲಬ್ ಸದಸ್ಯರು ಪದಾಧಿಕಾರಿಗಳು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!