ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಪ್ರೀತಿ ವಿಫಲವಾದ ಕಾರಣಕ್ಕೆ ಶಾಲೆಯ ಆವರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ವಿಷ ಸೇವಿಸಿದ್ದಾರೆ. ಉತ್ತರ ಪ್ರದೇಶದ ಮಹಾರಾಜ್ಗಂಜ್ನಲ್ಲಿ ಈ ಘಟನೆ ನಡೆದಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಯುವಕ ಸಾವನ್ನಪ್ಪಿದ್ದರೆ, ಅಪ್ರಾಪ್ತ ಬಾಲಕಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.
ಪೊಲೀಸರ ಪ್ರಕಾರ, ಮಹಾರಾಜ್ಗಂಜ್ನ ಶಾಲೆಯೊಂದರಲ್ಲಿ 12 ನೇ ತರಗತಿ ಓದುತ್ತಿರುವ 20 ವರ್ಷದ ವಿದ್ಯಾರ್ಥಿಯು ಅದೇ ಶಾಲೆಯ 16 ವರ್ಷದ ವಿದ್ಯಾರ್ಥಿನಿಯನ್ನು ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದನು. ಇಬ್ಬರೂ ಒಂದೇ ಗ್ರಾಮದವರು. ಇವರಿಬ್ಬರ ಪ್ರೀತಿಯ ವಿಷಯ ಮನೆಯಲ್ಲಿ ಗೊತ್ತಾಗಿದ್ದು, ಅವರ ಮದುವೆಗೆ ಹಿರಿಯರು ನಿರಾಕರಿಸಿದ್ದಾರೆ.

ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಈಗಲೇ ಮದುವೆ ಮಾಡುವುದಿಲ್ಲ ಎಂದು ಆಕೆಯ ಪೋಷಕರು ತಿಳಿಸಿದ್ದಾರೆ. ಇದರಿಂದಾಗಿ ಪ್ರೇಮಿಗಳಿಬ್ಬರೂ ಮನನೊಂದು
ಮಂಗಳವಾರ ಮಧ್ಯಾಹ್ನ ಶಾಲೆಯ ಆವರಣದಲ್ಲಿ ವಿಷ ಸೇವಿಸಿದ್ದಾರೆ.
ಶಾಲೆಯ ಸಿಬ್ಬಂದಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಯುವಕ ಮೃತಪಟ್ಟಿದ್ದಾನೆ. ಬಾಲಕಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್