Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೋಟರಿ ಭವನದಲ್ಲಿ ಕೋವಿಡ್ ಮುಂಜಾಗ್ರತಾ ಡೋಸ್ ಲಸಿಕಾ ಮಹಾಮೇಳ

Facebook
Twitter
Telegram
WhatsApp

ಚಿತ್ರದುರ್ಗ,(ಜ.21) : ನಗರದ ರೋಟರಿ ಬಾಲ ಭವನದಲ್ಲಿ ಆರೋಗ್ಯ ಇಲಾಖೆ, ರೋಟರಿ ಕ್ಲಬ್‌ ಮತ್ತು ರೋಟರಿ ಟ್ರಸ್ಟ್ ಸಹಯೋಗದೊಂದಿಗೆ ಕೋವಿಡ್ ಮುಂಜಾಗ್ರತಾ ವರಸೆಯ ಮಹಾಮೇಳ ಜರುಗಿತು.

ಡಾ.ಬಿ.ವಿ.ಗಿರೀಶ್ ತಾಲ್ಲೂಕು ಆರೋಗ್ಯಾಧಿಕಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಈ ಹಿಂದೆ ಕೋವ್ಯಾಕ್ಸಿನ್ 1 ನೇ ಮತ್ತು 2 ನೇ ವರಸೆ ಲಸಿಕೆ ಪಡೆದವರು 3 ನೇ ಮುಂಜಾಗ್ರತಾ ವರಸೆಯಾಗಿ ಕೋವ್ಯಾಕ್ಸಿನ್ ಲಸಿಕೆ ಪಡೆಯಿರಿ ಹಾಗೆಯೇ ಕೋವಿಶೀಲ್ಡ್ 1 ನೇ ಮತ್ತು 2 ನೇ ವರಸೆ ಲಸಿಕೆ ಪಡೆದವರು 3 ನೇ ಮುಂಜಾಗ್ರತಾ ವರಸೆಯಾಗಿ ಕೋವಿಶೀಲ್ಡ್ ಲಸಿಕೆ ಪಡೆಯಿರಿ.

ಲಸಿಕೆ ಪಡೆಯುವ ಮುನ್ನ ಈ ಹಿಂದೆ ಯಾವ ಲಸಿಕೆ ಪಡೆದಿದ್ದೇವೆ ಎಂದು ನೋಂದಣಿ ಘಟಕದಲ್ಲಿ ಖಚಿತ ಪಡೆಸಿಕೊಂಡು ನಂತರ ಲಸಿಕೆ ಪಡೆಯಿರಿ ಎಂದರು.

ಕಾರ್ಯಕ್ರಮದಲ್ಲಿ ‌ಒಟ್ಟು 50 ಕೋವ್ಯಾಕ್ಸಿನ್ ಮುಂಜಾಗ್ರತಾ ವರಸೆ ಮತ್ತು 150 ಜನರಿಗೆ ಕೋವಿಶೀಲ್ಡ್ ಮುಂಜಾಗ್ರತಾ ವರಸೆ ಲಸಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗಂಗಾಧರ್ ರೆಡ್ಡಿ, ರಂಗನಾಥ ರೆಡ್ಡಿ, ಮಂಜುನಾಥ, ಆರೋಗ್ಯ ಸುರಕ್ಷತಾಧಿಕಾರಿ ತಿಪ್ಪಮ್ಮ ರೋಟರಿ ಸದಸ್ಯರಾದ ಮಾಧುರಿ ಮಧು ಪ್ರಸಾದ್, ಜಯಶ್ರೀ ತರುಣ್ ಷಾ, ಗಾಯತ್ರಿ ಶಿವರಾಮ್, ಎಸ್.ವೀರೇಶ್, ಡಾ.ಸಿ.ತಿಪ್ಪೇಸ್ವಾಮಿ ಮತ್ತು ವೀರಭದ್ರಸ್ವಾಮಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!