Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಧನ : ದುಃಖದಲ್ಲಿ ಕುಮಾರಸ್ವಾಮಿ..!

Facebook
Twitter
Telegram
WhatsApp

ವಿಜಯಪುರ: ಜೆಡಿಎಸ್ ಪಕ್ಷ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿತ್ತು. ಸಿಂದಗಿ ಕ್ಷೇತ್ರದಲ್ಲಿ ಶಿವಾನಂದ ಪಾಟೀಲ್ ಅವರೇ ಸ್ಪರ್ಧೆ ನಡೆಸಬೇಕಿತ್ತು. ಆದರೆ ವಿಧಿಯಾಟ, ಚುನಾವಣೆಗೂ ಮುನ್ನವೇ ಅವರನ್ನು ತನ್ನತ್ತ ಕರೆದುಕೊಂಡು ಬಿಟ್ಟಿದೆ. ಶಿವಾನಂದ ಪಾಟೀಲ್ ಅವರ ಸಾವಿನಿಂದ ಕುಟುಂಬಸ್ಥರು ಮತ್ತು ಜೆಡಿಎಸ್ ಪಕ್ಷ ದುಃಖದಲ್ಲಿದೆ.

ಜೆಡಿಎಸ್ ಅಭ್ಯರ್ಥಿಯ ಅಕಾಲಿಕ ನಿಧನದಿಂದ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಸೋಮಜಾಳ ಗ್ರಾಮಕ್ಕೆ ಭೇಟಿ ನೀಡಿ, ಶಿವಾನಂದ ಪಾಟೀಲ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಪಾಟೀಲ್ ಅವರ ಪತ್ನಿ, ಪಮಗಳು, ಮಗನಿಗೆ ಧೈರ್ಯ ತುಂಬಿದ್ದಾರೆ. ನಿಮ್ಮ ಜೊತೆಗೆ ಜೆಡಿಎಸ್ ಯಾವಾಗಲೂ ಇರುತ್ತೆ ಎಂದು ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಕಾಲಿಕ ಮರಣಕ್ಕೆ ತುತ್ತಾಗಿ ಅಗಲಿದ ಸಿಂದಗಿ ವಿಧಾನಸಭೆ ಕ್ಷೇತ್ರದ @JanataDal_S ಪಕ್ಷದ ಅಭ್ಯರ್ಥಿ, ಸಹೃದಯಿ, ಸ್ನೇಹಜೀವಿ ಶ್ರೀ ಶಿವಾನಂದ ಪಾಟೀಲ್ ಆವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದೆ. ಅವರ ನಿಧನ ನಮ್ಮ ಪಕ್ಷಕ್ಕೆ ಆದ ಬಹುದೊಡ್ಡ ನಷ್ಟ. ವೈಯಕ್ತಿಕವಾಗಿ ನನಗೆ ಅತೀವ ನೋವು ಉಂಟು ಮಾಡಿದೆ. ಶ್ರೀ ಶಿವಾನಂದ ಪಾಟೀಲರ ಧರ್ಮಪತ್ನಿ ಶ್ರೀಮತಿ ವಿಶಾಲಾಕ್ಷಿ ಅವರು, ಪುತ್ರ ಅಭಿಷೇಕ್, ಪುತ್ರಿ ಐಶ್ವರ್ಯಾ ಅವರಿಗೆ ಸಾಂತ್ವನ ಹೇಳಿದೆ. ಆ ದುಃಖತಪ್ತ ಕುಟುಂಬದ ಜತೆ ನಾನು ಹಾಗೂ ಇಡೀ ಜೆಡಿಎಸ್ ಪಕ್ಷ ಇರುತ್ತದೆ ಎಂದು ಮಕ್ಕಳಿಬ್ಬರಿಗೂ ಧೈರ್ಯ ತುಂಬಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!