Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿಂಗರ್ ಮಂಗ್ಲಿ ಕಾರಿಗೆ ಬಳ್ಳಾರಿಯಲ್ಲಿ ಕಲ್ಲು ತೂರಾಟ : ಮಂಗ್ಲಿ ಪರಿಸ್ಥಿತಿ ಹೇಗಿದೆ..?

---Advertisement---

ಬಳ್ಳಾರಿ: ರಾಬರ್ಟ್ ಸಿನಿಮಾದ ತೆಲುಗು ವರ್ಷನ್ ಗೆ ಧ್ವನಿ ನೀಡಿ, ಖ್ಯಾತಿ ಪಡೆದಿದ್ದ ಗಾಯಕಿ ಮಂಗ್ಲಿ ಕಾರಿಗೆ ಪುಂಡರು ಕಲ್ಲು ತೂರಿದ್ದಾರೆ. ಗಾಯಕಿ ಮಂಗ್ಲಿ ಆ ಸಮಯದಲ್ಲಿ ಕಾರಿನ ಒಳಗೆ ಇದ್ದರು. ಸದ್ಯ ಕಾರಿನ ಒಳಗಿದ್ದವರಿಗೆ ಯಾವುದೇ ಸಮಸ್ಯೆ ಆಗಿಲ್ಲ.

ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಿಂಗರ್ ಮಂಗ್ಲಿಯನ್ನು ಗೆಸ್ಟ್ ಆಗಿ ಕರೆದಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಮಂಗ್ಲಿ, ಹಾಡನ್ನು ಹಾಡಿ ನೆರೆದಿದ್ದ ಜನರನ್ನು ರಂಜಿಸಿದ್ದಾರೆ. ಮಂಗ್ಲಿ ಹಾಡಿಗೆ ಶಿಳ್ಳೆ, ಚಪ್ಪಾಳೆ ಸಿಕ್ಕಿದೆ.

ಆದರೆ ಹಾಡನ್ನೆಲ್ಲಾ ಹಾಡಿ ವೇದಿಕೆಯಿಂದ ಇಳಿಯುವಾಗ ನೂಕು ನುಗ್ಗಲಾಗಿದೆ. ಮಂಗ್ಲಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅವರ ಮೇಕಪ್ ಟೆಂಟ್ ಗೂ ಪುಂಡರು ನುಗ್ಗಿದ್ದಾರೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು ಬಗ್ಗಿಲ್ಲ. ಬಳಿಕ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಾರಿನ ಗಾಜು ಪುಡಿ ಪುಡಿಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment