Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಲ್ಲಾ ನಿರೀಕ್ಷೆಯನ್ನು ಬಿಟ್ಟಿದ್ದೆ, ಇದು ಬಯಸದೆ ಬಂದ ಭಾಗ್ಯ : ಪದ್ಮವಿಭೂಷಣದ ಬಗ್ಗೆ ಎಸ್ ಎಂ ಕೃಷ್ಣ ಪ್ರತಿಕ್ರಿಯೆ

---Advertisement---

ಬೆಂಗಳೂರು: ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿದ ಎಸ್ ಎಂ ಕೃಷ್ಣ ಅವರು ಇತ್ತಿಚೆಗೆ ಎಲ್ಲಿಯೂ ರಾಜಕೀಯ ಕಾರ್ಯಕ್ರಮದಲ್ಲಿ ಗುರುತಿಸಿಕೊಳ್ಳುತ್ತಿರಲಿಲ್ಲ. ರಾಜಕೀಯ ನಿವೃತ್ತಿ ಪಡೆದಿರುವುದಾಗಿಯೇ ತಿಳಿಸಿದ್ದರು. ಇದೀಗ ಎಸ್ ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ.

ಪದ್ಮವಿಭೂಷಣ ಪ್ರಶಸ್ತಿ ಬಂದ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು, ಇದು ಬಯಸದೇ ಬಂದ ಭಾಗ್ಯ. ನಾನು ಎಲ್ಲಾ ನಿರೀಕ್ಷೆಗಳನ್ನು ಬಿಟ್ಟು ಬಿಟ್ಟಿದ್ದೆ. ಆರು ದಶಕಗಳ ಕಾಲ ಕನ್ನಡಿಗರು ನನ್ನನ್ನು ಪೋಷಣೆ ಮಾಡಿದ್ದಾರೆ. ಏಳು ಕೋಟಿ ಕನ್ನಡಿಗರಿಗೆ, ಭಾರತೀಯರಿಗೆ ಈ ಪ್ರಶಸ್ತಿಯನ್ನು ನಾನು ಅರ್ಪಣೆ ಮಾಡುತ್ತೇನೆ. ಪ್ರಧಾನ ಮಂತ್ರಿಗಳು, ಗೃಹ ಸಚಿವರಿಗೆ ಅನಂತ ಧನ್ಯವಾದ ಸಮರ್ಪಣೆ ಮಾಡುತ್ತೇನೆ ಎಂದಿದ್ದಾರೆ.

ಆಗಿನ ರಾಜಕಾರಣವೇ ಬೇರೆ, ಈಗಿನ ರಾಜಕಾರಣವೇ ಬೇರೆ. ರಾಜಕಾರಣ ಅದರದ್ದೇ ದಿಕ್ಕು ದೆಶೆಯನ್ನು ಹೊಂದಿರುತ್ತದೆ. ಕಾಲಘಟ್ಟಕ್ಕೆ ತಕ್ಕಂತೆ ಬದಲಾಗುತ್ತಾ ಇರುತ್ತದೆ. ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ರಾಜಕಾರಣಿಗಳು ಚರ್ಚೆ ಮಾಡುತ್ತಾರೆ. ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿ ಪಡೆದಿರುವ ಕಾರಣ ಅಂಥಹ ವಿಚಾರಗಳ ಬಗ್ಗೆ ನಾನು ಚರ್ಚೆ ನಡೆಸುವುದಿಲ್ಲ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment