Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾರ ಹಾಕಿದ್ದ ಪೈನಾಪಲ್ ಅನ್ನೇ ಕಿತ್ತು ತಿಂದ ಡಿಕೆ ಶಿವಕುಮಾರ್..!

Facebook
Twitter
Telegram
WhatsApp

ಮಂಡ್ಯ: ರಾಜಕಾರಣಿಗಳು ಯಾವಾಗಲೂ ಸೀರಿಯಸ್ ಅಲ್ಲ. ಮಾತನ್ನು ಸೀರಿಯಸ್ ಆಗಿ ಆಡುತ್ತಾರೆ, ವಾಗ್ದಾಳಿಯನ್ನು ಸೀರಿಯಸ್ ಆಗಿ ಮಾಡುತ್ತಾರೆ. ಆದರೆ ಇವರ ನಡುವೆಯೂ ಆಗಾಗ ಫನ್ ಮೂಮೆಂಟ್ ನಡೆಯುತ್ತದೆ. ಅಂಥದ್ದೊಂದು ಘಟನೆ ಇಂದು ಮಂಡ್ಯದಲ್ಲಿ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಹಾಕಿದ್ದ ಹಾರದಲ್ಲಿನ ಹಣ್ಣನ್ನೇ ಕಿತ್ತು ತಿಂದಿರುವ ಸನ್ನಿವೇಶ ಕಂಡು ಬಂದಿದೆ.

ಸದ್ಯ ಚುನಾವಣಾ ಪ್ರಚಾರದಲ್ಲಿ ರಾಜಕೀಯ ಪಕ್ಷಗಳು ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಕಾಂಗ್ರೆಸ್ ಕೂಡ ಪ್ರಜಾಧ್ವನಿ ಎಂಬ ಕಾರ್ಯಕ್ರಮದಡಿ ಜನರ ಬಳಿ ತಲುಪುತ್ತಿದೆ. ಇಂದು ಮಂಡ್ಯದಲ್ಲಿ ರ್ಯಾಲಿ ನಡೆದಿದೆ. ಈ ವೇಳೆ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿದ್ದರು. ಈ ವೇಳೆ ಅಭಿಮಾನಿಗಳೆಲ್ಲಾ ಕಾಂಗ್ರೆಸ್ ನಾಯಕರಿಗೆ ಪೈನಾಪಲ್ ಹಾರವನ್ನು ಹಾಕಿದರು.

ಹಾರ ತುಂಬಾ ದೊಡ್ಡದಾಗಿತ್ತು. ಹೀಗಾಗಿ ಜೆಸಿಬಿ ಮೂಲಕ ಹಾರವನ್ನು ಹಾಕಲಾಗಿತ್ತು. ಈ ವೇಳೆ ಹಾರದಿಂದಾನೇ ಡಿಕೆಶಿ ಪಕ್ಕದಲ್ಲಿ ಇದ್ದ ಒಬ್ಬರು ಹಣ್ಣನ್ನು ಕಿತ್ತುಕೊಟ್ಟರು. ಆ ಹಣ್ಣನ್ನು ಡಿಕೆ ಶಿವಕುಮಾರ್ ಕೈನಲ್ಲಿಯೇ ಎರಡು ಭಾಗ ಮಾಡಿ, ತಿಂದರು. ಜೊತೆಗೆ ಪಕ್ಕದಲ್ಲಿಯೂ ಇದ್ದವರಿಗೂ ನೀಡಿದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!