Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಕ್ಕೆ ಬಂಡಾಯದ ಎಚ್ಚರಿಕೆ ನೀಡಿದ ಕಳಸಾ ಬಂಡೂರಿ – ಮಹಾದಾಯಿ ಹೋರಾಟಗಾರರು

Facebook
Twitter
Telegram
WhatsApp

ಬೆಂಗಳೂರು: ಕಳಸಾ ಬಂಡೂರಿ ಯೋಜನೆ ಜಾರಿ ಮಾಡದೇ ಇದ್ದಲ್ಲಿ ಬಂಡಾಯದ ಕಹಳೆ ಮೊಳಗಿಸಿ ಮತ್ತೆ ಬಂದ್ ನಂತಹ ಹಾದಿ ತುಳಿಯಬೇಕಾಗುತ್ತದೆ ಎಂದು ಕಳಸಾ ಬಂಡೂರಿ, ಮಹಾದಾಯಿ ರೈತ ಹೋರಾಟ ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸರ್ಕಾರಕ್ಕೆ ಬಂಡಾಯದ ಎಚ್ಚರಿಕೆ ನೀಡಿದ ಕಳಸಾ ಬಂಡೂರಿ ಮತ್ತು ಮಹಾದಾಯಿ ಹೋರಾಟ ಒಕ್ಕೂಟ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮಹದಾಯಿ – ಕಳಸಾ ಬಂಡೂರಿ‌ ರೈತ ಒಕ್ಕೂಟದ ನಿಯೋಗ ಇಂದು ಬಸವರಾಜ್ ಬೊಮ್ಮಯಿಯವರನ್ನ ಭೇಟಿ ನೀಡಿತು. ಕಳಸಾ ಬಂಡೂರಿ, ಮಹದಾಯಿ ಯೋಜನೆ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿತು.

ಈ ವೇಳೆ, ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪು ಬಂದ ನಂತರ ಕ್ರಮ ಕೈಗೊಳ್ಳುವ ಕುರಿತು ಸಿಎಂ ಆಶ್ವಾಸನೆ ನೀಡಿದರು ಎನ್ನಲಾಗಿದೆ.ಸಿಎಂ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕೂಟದ ಮುಖಂಡ ಸುಭಾಶ್ಚಂದ್ರಗೌಡ ಪಾಟೀಲ್, ಸಿಎಂ ಮೇಲೆ ನಮಗೆ ಭರವಸೆಯಿದೆ. ನಾವು ಕಾದು ನೋಡುತ್ತೇವೆ. ಒಂದು ವೇಳೆ ನಮ್ಮ ಬೇಡಿಕೆಗೆ ತಕ್ಕ ಉತ್ತರ ಸಿಗದೇ ಇದ್ದಲ್ಲಿ ಉಗ್ರ ಹೋರಾಟ ಮಾಡುತ್ತೇವೆ. ಬಂಡಾಯದ ನೆಲದಲ್ಲಿ ಮತ್ತೊಮ್ಮೆ ಬಂಡಾಯ ಮಾಡುತ್ತೇವೆ. ಮಹದಾಯಿ ಆಗೋವರೆಗೂ ನಾವು ಹೋರಾಟ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!