Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೃಹತ್ ದೂರದರ್ಶಕ ಉದ್ಘಾಟಿಸಿದ ಹವ್ಯಾಸಿ ಖಗೋಳ ವೀಕ್ಷಕ ಹೆಚ್.ಎಸ್.ಟಿ.ಸ್ವಾಮಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.28): ದೂರದರ್ಶಕಗಳ ಆವಿಷ್ಕಾರದ ನಂತರ ಬಾಹ್ಯಾಕಾಶ ಕ್ಷೇತ್ರದಲ್ಲಿ ಅನೇಕ ಸಂಶೋಧನೆಗಳನ್ನು ಕೈಗೊಳ್ಳಲು ಖಗೋಳ ವಿಜ್ಞಾನಿಗಳಿಗೆ ಅನುಕೂಲವಾಯಿತೆಂದು ಹವ್ಯಾಸಿ ಖಗೋಳ ವೀಕ್ಷಕರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ರಾಜ್ಯ ಖಚಾಂಚಿ ಎಚ್.ಎಸ್.ಟಿ.ಸ್ವಾಮಿ ತಿಳಿಸಿದರು.

ಇಲ್ಲಿನ ಡಾನ್‍ಬೋಸ್ಕೋ ಶಾಲೆಯಲ್ಲಿ ಬೃಹತ್ ದೂರದರ್ಶಕ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತ ಖಗೋಳ ವಿಜ್ಞಾನ ತುಂಬಾ ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ. ಕ್ರಿ.ಶ. 1610 ರಲ್ಲಿ ಗೆಲಿಲಿಯೋ ದೂರದರ್ಶಕವನ್ನು ತಯಾರಿಸಿ ಜಗತ್ತೆ ಬೆರಗಾಗುವಂತೆ ಮಾಡಿದ್ದಾನೆ.

ಈಗ ಸಂಶೋಧನೆಗಳಿಗೆ ನೆರವಾಗಲು ಹೆಚ್ಚು ಸಾಮರ್ಥ್ಯವನ್ನು ದೂರದರ್ಶಕಗಳು ಮಾರುಕಟ್ಟೆಯಲ್ಲಿ ಬಳಕೆಗೆ ಸಿಗುತ್ತಿವೆ. ಅವುಗಳ ಮೂಲಕ ಕೋಟಿ ಕೋಟಿ ಕಿ.ಮೀ. ದೂರದಲ್ಲಿರುವ ಆಕಾಶಕಾಯಗಳನ್ನು ತುಂಬಾ ಹತ್ತಿರದಿಂದ ವೀಕ್ಷಿಸಬಹುದಾಗಿದೆ.

ಗ್ರಹಗಳು, ಉಪಗ್ರಹಗಳು, ಧೂಮಕೇತುಗಳು,ನೆಬುಲಾಗಳು, ಗ್ಯಾಲಕ್ಸಿಗಳನ್ನು ನೋಡಿ ಆನಂದಿಸಬಹುದಾಗಿದೆ ಎಂದು ಮಕ್ಕಳಲ್ಲಿ ಕುತೂಹಲ ಮೂಡಿಸಿದರು.

ಪ್ರಾಂಶುಪಾಲ ಫಾದರ್ ವಿಜಯ ಮಾರ್ಟಿನ್ ಮಾತನಾಡಿ ನಮ್ಮ ಜಿಲ್ಲೆಯಲ್ಲಿಯೇ ಅತಿ ದೊಡ್ಡ ದೂರದರ್ಶಕ ಇದಾಗಿದ್ದು, ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಡಾನ್‍ಬೋಸ್ಕೋ ಶಾಲೆಯ ವಿಜ್ಞಾನ ಶಿಕ್ಷಕರಾದ ಸಂದೀಪ್, ಇಂಧೂದರ್, ಮಾನಸ, ಲಕ್ಷ್ಮಿದೇವಿ, ಪಂಕಜ, ದೀಪ, ಸುಷ್ಮಾ, ಶ್ವೇತ ಹಾಗೂ ಎಲ್ಲಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!