Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕ್ಕಪ್ಪನ ವಿರುದ್ಧ ತಿರುಗಿಬಿದ್ದ ಸೂರಜ್ : ತಮ್ಮನ ಪರ ನಿಂತ ರೇವಣ್ಣ..!

Facebook
Twitter
Telegram
WhatsApp

ಜೆಡಿಎಸ್ ನಲ್ಲಿ ಕುಟುಂಬದಲ್ಲಿಯೇ ಟಿಕೆಟ್ ಫೈಟ್ ಶುರುವಾಗಿದೆ. ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆಗೆ ಇಳಿದಿದ್ದಾರೆ. ಆದ್ರೆ ಟಿಕೆಟ್ ವಿಚಾರದಲ್ಲಿ ಪರ ವಿರೋಧ ಕೇಳಿ ಬರುತ್ತಿದೆ. ಕುಮಾರಸ್ವಾಮಿ ಟಿಕೆಟ್ ಗೆ ಒಪ್ಪಿಗೆ ನೀಡುತ್ತಿಲ್ಲ. ಆ ಕಡೆ ಪತಿ ರೇವಣ್ಣ ಕಡೆಯಿಂದ ಟಿಕೆಟ್ ಗೆ ಒತ್ತಡ ಹಾಕುತ್ತಿದ್ದಾರೆ. ಇದರ ನಡುವೆ ಮಗ ಸೂರಜ್ ಕೂಡ ಅಮ್ಮನ ಪರವಾಗಿ ನಿಂತಿದ್ದಾರೆ. ಬಿಜೆಪಿ ನಾಯಕರು ಕೂಡ ಭವಾನಿ ರೇವಣ್ಣ ಅವರಿಗೆ ನಮ್ಮ ಪಕ್ಕಕ್ಕೆ ಬನ್ನಿ ಅಂತ ಕರೆಯುತ್ತಿದ್ದಾರೆ.

ಈ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಹೆಚ್ ಡಿ ರೇವಣ್ಣ ಅವರು ಮೌನ ಮುರಿದಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣರನ್ನು ಬೇರ್ಪಡಿಸುವುದಕ್ಕೆ ಆಗಲ್ಲ. ಬೇರ್ಪಡಿಸುತ್ತೇವೆ ಅಂತ ಯಾರಾದ್ರೂ ಎಂದುಕೊಂಡರೆ ಅದು ಭ್ರಮನಿರಸವಾಗಿರುತ್ತದೆ. ನಮ್ಮ ಜಿಲ್ಲೆಯ ಏಳು ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡ ಅವರು, ಕುಮಾರಸ್ವಾಮಿ ಅವರು, ಸಿ ಎಂ ಇಬ್ರಾಹಿಂ ಅವರೇ ತೀರ್ಮಾನಿಸುತ್ತಾರೆ ಎಂದಿದ್ದಾರೆ.

ಹಾಸನ ಜಿಲ್ಲೆ ಕಳೆದ ಹತ್ತು ವರ್ಷದಿಂದ ಅಭಿವೃದ್ಧಿಯಾಗಿಲ್ಲ. ಕುಮಾರಣ್ಣ ಬರದಿದ್ದರೆ ಹಾಸನದ ಆಸ್ಪತ್ರೆ ಆಗಲ್ಲ. ಕೆಲವರು ಹಾಸನ ಟಿಕೆಟ್ ಅನ್ನು ಭವಾನಿ ಅವರಿಗೆ ಕೊಡಿ ಅಂತಾರೆ, ಇನ್ನು ಕೆಲವರು ಬೇರೆಯವರಿಗೆ ಕೊಡಿ ಅಂತಾರೆ. ಅದನ್ನು ತೀರ್ಮಾನ ಮಾಡುವುದು ಪಕ್ಷ. ನಾನಾಗಲೀ, ಸೂರಜ್ ಆಗಲೀ, ರೇವಣ್ಣ ಆಗಲಿ ಅಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!