Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣಾ ಪ್ರಚಾರದಲ್ಲಿ ರೆಡ್ಡಿ ಫುಲ್ ಬ್ಯುಸಿ : ಬಳ್ಳಾರಿಯಲ್ಲಿ ಸಹೋದರನೆದುರೇ ಪತ್ನಿ ಕಣಕ್ಕೆ..!

Facebook
Twitter
Telegram
WhatsApp

ಕೊಪ್ಪಳ: ಈ ಬಾರಿಯ ಚುನಾವಣಾ ಕಣ ರಂಗೇರಿದೆ. ಕರ್ನಾಟಕದ ರಾಜ್ಯದ ನೆಲ ಚುನಾವಣಾ ಬಿಸಿಯಿಂದ ಸುಡುತ್ತಿದೆ. ಮೂರು ಪಕ್ಷಗಳ ಪ್ರಚಾರ ಕಾರ್ಯ ಜೋರಾಗಿದೆ. ಅದರ ಜೊತೆಗೆ ಇದೀಗ ಜನಾರ್ದನ ರೆಡ್ಡಿ ಪಕ್ಷವೂ ಸದ್ದು ಮಾಡುತ್ತಿದೆ.

ಬಿಜೆಪಿಯಿಂದ ಟಿಕೆಟ್ ಬಯಸಿದ್ದಂತ ರೆಡ್ಡಿಗೆ ಟಿಕೆಟ್ ಸಿಗದ ಬೇಸರ ಮತ್ತೊಂದು ಪಕ್ಷವನ್ನೇ ಕಟ್ಟುವಂತೆ ಮಾಡಿದೆ. ಜನಾರ್ದನ ರೆಡ್ಡಿ ಪಕ್ಷಕ್ಕೆ ಬಿಜೆಪಿ ನಾಯಕರು ಬರುತ್ತಿದ್ದಾರೆ. ಇದರ ನಡುವೆ ಪಕ್ಷ ಕಟ್ಟುವುದು ಬೇಡ ಎಂದೇ ಸಹೋದರ ಸೋಮಶೇಕರ್ ರೆಡ್ಡಿ ಹಾಗೂ ಸ್ನೇಹಿತ ಶ್ರೀರಾಮುಲು ತಿಳಿಸಿದ್ದರು. ಆದರೂ ಯಾರ ಮಾತನ್ನು ಕೇಳದೆ ಪಕ್ಷ ಸ್ಥಾಪನೆ ಮಾಡಿದ್ದಾರೆ ಜನಾರ್ದನ ರೆಡ್ಡಿ ಅವರು. ಜೊತೆಗೆ ಚುನಾವಣಾ ಪ್ರಚಾರದಲ್ಲೂ ಫುಲ್ ಬ್ಯುಸಿಯಾಗಿದ್ದಾರೆ.

ಇದೀಗ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ತಮ್ಮ ಹೆಂಡತಿಯನ್ನು ಕಣಕ್ಕೆ ಇಳಿಸಿದ್ದಾರೆ. ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ನನ್ನ ಪತ್ನಿ ಅರುಣಾ ಲಕ್ಷ್ಮೀಯನ್ನು ಕಣಕ್ಕೆ ಇಳಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಈ ಮೊದಲು ಸಹೋದರ ಎದುರು ಜನಾರ್ದನ ರೆಡ್ಡಿ ಅವರೇ ಸ್ಪರ್ಧೆಗೆ ಇಳಿಯುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ತಮ್ಮ ಹೆಂಡತಿಯನ್ನು ಸ್ಪರ್ಧೆಗೆ ಬಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!