Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಆಟೋರಿಕ್ಷಾ ದರಪರಿಷ್ಕರಣೆ : ಫೆ.1 ರಿಂದ 28 ರವರೆಗೆ ಆಟೋರಿಕ್ಷಾ ಮೀಟರ್‌ಗಳ ಸತ್ಯಾಪನೆ, ಮುದ್ರೆ ಕಾರ್ಯ

Facebook
Twitter
Telegram
WhatsApp

ಚಿತ್ರದುರ್ಗ,(ಜ.31) : 2023 ಜನವರಿ 23vರಂದು ರಂದು ಜರುಗಿದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಆಟೋರಿಕ್ಷಾ ಪ್ರಯಾಣದರವನ್ನು ಮೊದಲ 1.5 ಕಿ.ಮೀ ಗೆ ರೂ.30/- ನಿಗಧಿಪಡಿಸಿ ನಂತರದ ಪ್ರತಿ 1 ಕಿಮೀ ಮತ್ತು ಭಾಗಶಃಕ್ಕೆ ರೂ.15/- ದರ ನಿಗಧಿಪಡಿಸಿ ಪರಿಷ್ಕರಿಸಲಾಗಿರುತ್ತದೆ.

ಪರಿಷ್ಕೃತ ದರಕ್ಕೆ ಅನುಗುಣವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ ಅವರು 2023ರ ಫೆಬ್ರವರಿ 1 ರಿಂದ 28 ರವರೆಗೆ ಚಾಲ್ತಿ ಆಟೋರಿಕ್ಷಾಗಳಿಗೆ ಮೀಟರ್ ಸತ್ಯಾಪನೆ ಮತ್ತು ಮುದ್ರೆ ಮಾಡಿಕೊಡುವ ಕಾರ್ಯವನ್ನು ಬೆಳಿಗ್ಗೆ 7 ಗಂಟೆಗೆ ಚಿತ್ರದುರ್ಗದ ಹಳೇ ಬೆಂಗಳೂರು ರಸ್ತೆ(ಜೈಲುರಸ್ತೆ)ಯಲ್ಲಿ ಹಮ್ಮಿಕೊಳ್ಳಲಾಗಿದೆ.

ಆಟೋರಿಕ್ಷಾ ಚಾಲಕರು ತಮ್ಮ ವಾಹನಗಳಿಗೆ ನೂತನ ದರಕ್ಕೆ ಅನುಗುಣವಾಗಿ ಕಡ್ಡಾಯವಾಗಿ ಆಟೋರಿಕ್ಷಾ ಮೀಟರ್‌ಗಳ ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!