Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಠಾಣ್ ಗೆಲುವಿನ ಬೆನ್ನಲ್ಲೇ ಶಾರುಖ್ ಖಾನ್ ಗೆ ಸಿನಿಮಾ ಮಾಡುವುದಕ್ಕೆ ಮುಂದಾಯ್ತಾ ಹೊಂಬಾಳೆ..?

Facebook
Twitter
Telegram
WhatsApp

ಸತತ ಸೋಲುಗಳನ್ನೇ ನೋಡಿದ್ದ ಬಾಲಿವುಡ್ ಮಂದಿಗೆ ಮರು ಜೀವ ನೀಡಿದ್ದು, ಪಠಾಣ್ ಸಿನಿಮಾ. ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಸಿನಿಮಾ ಸದ್ಯ ನಿರೀಕ್ಷೆಗೂ ಮೀರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ಈ ಬೆನ್ನಲ್ಲೇ ಸ್ಯಾಂಡಲ್ವುಡ್ ನಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಶಾರುಖ್ ಖಾನ್ ಗೆ ಹೊಂಬಾಳೆ ಬ್ಯಾನರ್ ಸಿನಿಮಾ ಮಾಡಲಿದೆ ಎಂಬ ಮಾತು ಕೇಳಿ ಬಂದಿದೆ.

ಹೊಂಬಾಳೆ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣವಾಗುತ್ತೆ ಎಂದರೆ ಅದು ಕಣ್ಣಿಗೆ ಹಬ್ಬವೇ ಸರಿ. ಸಿನಿಮಾ ಮನಸ್ಸಿನಲ್ಲಿ ಉಳಿಯುವುದು ಪಕ್ಕ. ಕನ್ನಡ ಇಂಡಸ್ಟ್ರಿ ಮಾತ್ರವಲ್ಲ ಹೊಂಬಾಳೆ ಅಂತ ಸುತ್ತ ಮುತ್ತ ಇರುವ ಇಂಡಸ್ಟ್ರಿಯವರು ತಿರುಗಿ ನೋಡುವಂತ ಹೆಸರು ಮಾಡಿದೆ. ಇದೀಗ ಶಾರುಕ್ ಖಾನ್ ಗೆ ಸಿನಿಮಾ ಮಾಡಲು ಹೊರಟಿದೆ ಎಂಬ ವಿಚಾರ ಸದ್ದು ಮಾಡುತ್ತಿದ್ದಂತೆ ಅದಕ್ಕೆ ಹೊಂಬಾಳೆಯಿಂದಾನೇ ಉತ್ತರ ಸಿಕ್ಕಿದೆ.

ಈ ಬಗ್ಗೆ ಮಾತನಾಡಿರುವ ವಿಜಯ್ ಕಿರಗಂದೂರು, “ಕೆಲವು ತಿಂಗಳಿನಿಂದ ಶಾರುಖ್ ಖಾನ್ ಗೆ ಸಿನಿಮಾ ಮಾಡುತ್ತೇವೆ ಎಂಬ ವದಂತಿ ಹಬ್ಬಿದೆ. ಸದ್ಯಕ್ಕೆ ಅಂತಹ ಯಾವುದೇ ಯೋಜನೆ ಇಲ್ಲ. ನಾವೂ ಶಾರುಖ್ ಖಾನ್ ಅಥವಾ ಅವರ ತಂಡದೊಂದಿಗೆ ಮಾತನಾಡಿಲ್ಲ. ಒಳ್ಳೆಯ ಕಥೆಯಿಲ್ಲದೆ ಹಿಂದಿ ಸಿನಿಮಾ ಮಾಡುವ ಯೋಜನೆಯಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!