Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇದು 60 ವರ್ಷದ ಸಮಸ್ಯೆ .. ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ : ಶರಾವತಿ ಸಂತ್ರಸ್ತರ ಬಗ್ಗೆ ಬಿಎಸ್ವೈ ಮಾತು..!

---Advertisement---

 

ಬೆಂಗಳೂರು: ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಸಂತ್ರಸ್ತರ ಜಮೀನು ಹಕ್ಕಿನ ಬಗ್ಗೆ ಚರ್ಚೆ ನಡೆಸಲಾಗಿದೆ. ಚರ್ಚೆಯ ಬಳಿಕ ಮಾತನಾಡಿದ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಶರಾವತಿ ಯೋಜನೆಯಿಂದ ಭೂಮಿ ಕಳೆದುಕೊಂಡವರಿಗೆ, ಜಮೀನು ಹಕ್ಕು ವಿತರಣೆ ಮಾಡುವ ಪ್ರಕ್ರಿಯೆ ಶುರುವಾಗಿದೆ. ಶರಾವತಿ ಸಂತ್ರಸ್ತರಿಗೆ ತಾವೂ ಉಳಿಮೆ ಮಾಡುವ ಜಮೀನು ಹಕ್ಕು ನೀಡುವುದು 60 ವರ್ಷದ ಸಮಸ್ಯೆಯಾಗಿದೆ.

ಇತ್ತಿಚೆಗೆ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ್ದೀವಿ. ಅವರು ಕೂಡ ಎಲ್ಲಾ ಸರ್ವೇ ಪ್ರಪೋಸಲ್ ಕಳುಹಿಸಿ ಎಂದಿದ್ದಾರೆ. ಹೀಗಾಗಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಶರಾವತಿ ಯೋಜನೆಗೆ ಭೂಮಿ ಕೊಟ್ಟವರಿಗೆ ಈಗ ಭೂಮಿ ಇಲ್ಲದಂತೆ ಆಗಿದೆ.

ಈಗಾಗಲೇ ಜಿಲ್ಲಾಡಳಿತ ಸರ್ವೇ ಮಾಡಿ ಪ್ರಸ್ತಾವನೆ ಸಿದ್ದ ಪಡಿಸಿದೆ. ಸುಮಾರು 9 ಸಾವಿರ ಎಕರೆ ಜಮೀನು ಹಕ್ಕು ನೀಡುವುದಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುತ್ತೇವೆ. ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡೋಕೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...